back to top
18.2 C
Bengaluru
Tuesday, January 13, 2026
HomeBengaluru UrbanAnekalತಾಲ್ಲೂಕು ಹೋಬಳಿಗಳಲ್ಲಿ 100 ಹಾಸಿಗೆಯ ಸುಸಜ್ಜಿತ ಆಸ್ಪತ್ರೆಗಳ ನಿರ್ಮಾಣ

ತಾಲ್ಲೂಕು ಹೋಬಳಿಗಳಲ್ಲಿ 100 ಹಾಸಿಗೆಯ ಸುಸಜ್ಜಿತ ಆಸ್ಪತ್ರೆಗಳ ನಿರ್ಮಾಣ

- Advertisement -
- Advertisement -

Anekal : ಜನಸಂಖ್ಯೆ ಹೆಚ್ಚುತ್ತಿರುವ ಹೋಬಳಿಗಳಲ್ಲಿ ಪ್ರತಿ ಹೋಬಳಿಗೂ 100 ಹಾಸಿಗೆಯ ಸಾಮರ್ಥ್ಯದ ಸರ್ಕಾರಿ ಆಸ್ಪತ್ರೆ ನಿರ್ಮಿಸಲು ರಾಜ್ಯ ಸರ್ಕಾರ ಕ್ರಿಯಾಶೀಲ ಯೋಜನೆ ರೂಪಿಸಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ತಾಲ್ಲೂಕಿನ ದೊಮ್ಮಸಂದ್ರದಲ್ಲಿ ಸೋಮವಾರ ನೂತನ ಸರ್ಕಾರಿ ಆಸ್ಪತ್ರೆ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, “ಎರಡು ಲಕ್ಷ ಜನಸಂಖ್ಯೆಗೆ ಕನಿಷ್ಟ 100 ಹಾಸಿಗೆಯ ಆಸ್ಪತ್ರೆ ಅಗತ್ಯ. ಆನೇಕಲ್ ತಾಲ್ಲೂಕಿನಲ್ಲಿ ಜನಸಂಖ್ಯೆ 7 ಲಕ್ಷದ ಮೇಲಿದೆ. ಇಂತಹ ಪರಿಸ್ಥಿತಿಯಲ್ಲಿ ಇನ್ನೆರಡು-ಮೂರು ಆಸ್ಪತ್ರೆಗಳಿದ್ದರೂ ಸಾಕಾಗುವುದಿಲ್ಲ. ಹೀಗಾಗಿ ಪ್ರತಿ ಹೋಬಳಿಗೊಂದು ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಯೋಜನೆ ರೂಪಿಸಲಾಗಿದೆ” ಎಂದು ಹೇಳಿದರು.

ಬೆಂಗಳೂರು ಹೊರವಲಯದ ತಾಲ್ಲೂಕುಗಳಲ್ಲಿ ಜನಸಂಖ್ಯೆ ವೇಗವಾಗಿ ಏರಿಕೆಯಾಗುತ್ತಿರುವುದರಿಂದ ಈ ಪ್ರದೇಶಗಳಿಗೇ ಅನುಗುಣವಾಗಿ ಆರೋಗ್ಯ ಸೌಲಭ್ಯ ವಿಸ್ತರಣೆ ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಹೆಚ್ಚು ಆಸ್ಪತ್ರೆಗಳನ್ನು ನಿರ್ಮಿಸಲು ಮುಖ್ಯಮಂತ್ರಿ ಅನುಮೋದನೆ ಪಡೆದು, ಮೊದಲ ಹಂತವಾಗಿ ದೊಮ್ಮಸಂದ್ರದಲ್ಲಿ ₹37 ಕೋಟಿ ವೆಚ್ಚದ ನವೀನ ಆಸ್ಪತ್ರೆ ನಿರ್ಮಾಣ ಕಾರ್ಯಕ್ಕೆ ಭೂಮಿ ಪೂಜೆ ನೆರವೇರಿಸಲಾಗಿದೆ ಎಂದು ತಿಳಿಸಿದರು.

ಹೆಚ್ಚುವರಿ ಯೋಜನೆಗಳು:

ಹೊಸಕೋಟೆ, ನೆಲಮಂಗಲ, ಆನೇಕಲ್, ಬೆಂಗಳೂರು ಉತ್ತರ ತಾಲ್ಲೂಕುಗಳಲ್ಲಿ ಕೂಡ 100 ಹಾಸಿಗೆಯ ಆಸ್ಪತ್ರೆಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗಿದೆ.

ಜೂನ್‌ನಲ್ಲಿ ಹೊಸಕೋಟೆಯಲ್ಲಿ ಕೂಡ ಭೂಮಿ ಪೂಜೆ ನೆರವೇರಿಸಲಾಗುವುದು ಎಂದು ತಿಳಿಸಿದರು.

ಆರೋಗ್ಯ ಸೇವೆಗಳಿಗೆ ಭದ್ರತೆ:

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿಯೂ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ಕುರಿತು ಸರ್ಕಾರ ಬದ್ಧವಾಗಿದೆ.

ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಲಭ್ಯತೆ ಸುಧಾರಣೆ, ಮತ್ತು ಪ್ರತಿ ಆಸ್ಪತ್ರೆಗೆ 2 ಸ್ತ್ರೀರೋಗ ತಜ್ಞರು ಹಾಗೂ ಮಕ್ಕಳ ತಜ್ಞರು ನೇಮಕ ಮಾಡುವ ಕ್ರಮ ಕೈಗೊಳ್ಳಲಾಗಿದೆ.

ಇದರಿಂದ ಮಹಿಳೆ ಹಾಗೂ ಮಕ್ಕಳಿಗೆ 24×7 ವೈದ್ಯಕೀಯ ಸೇವೆ ಲಭ್ಯವಾಗಲಿದೆ.

ಆಶಾ ಕಾರ್ಯಕರ್ತರ ವೇತನ ಹೆಚ್ಚಳ:

ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ 40 ಸಾವಿರ ಆಶಾ ಕಾರ್ಯಕರ್ತರ ಪೈಕಿ 15 ಸಾವಿರರಿಗೆ ವೇತನ ಕಡಿಮೆ ದೊರೆತಿತ್ತು. ಅವರಿಗೆ ಹೆಚ್ಚುವರಿ ₹1,000 ವೇತನ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.

ತಾಲ್ಲೂಕು ಮಟ್ಟದ ಆರೋಗ್ಯ ಸೌಲಭ್ಯ ವಿಸ್ತರಣೆ:

ಆನೇಕಲ್ ವಿಧಾನಸಭಾ ಕ್ಷೇತ್ರದ ಶಾಸಕ ಬಿ. ಶಿವಣ್ಣ ಮಾತನಾಡಿ, “ಪ್ರತಿ ಹೋಬಳಿಯಲ್ಲೂ ತಾಲ್ಲೂಕು ಮಟ್ಟದ ಆಸ್ಪತ್ರೆ ಸ್ಥಾಪನೆಯತ್ತ ಶ್ರಮಿಸಲಾಗುತ್ತಿದೆ” ಎಂದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನರೇಶ್, ಉಪಾಧ್ಯಕ್ಷೆ ದಿವ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದೊಡ್ಡಹಾಗಡೆ ಹರೀಶ್ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳು, ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

ಆಧುನಿಕ ತಂತ್ರಜ್ಞಾನ ಆಸ್ಪತ್ರೆ:

₹37 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುವ ಈ ಆಸ್ಪತ್ರೆಯಲ್ಲಿ ಎಕ್ಸ್‌-ರೇ, ಸಿಟಿ ಸ್ಕ್ಯಾನ್, ಡಯಾಲಿಸಿಸ್, ತುರ್ತು ಘಟಕ ಸೇರಿದಂತೆ ಎಲ್ಲಾ ಆಧುನಿಕ ಸೌಲಭ್ಯಗಳು ಲಭ್ಯವಿರಲಿವೆ.

ವೈದ್ಯರು ಹಾಗೂ ನರ್ಸ್‌ಗಳಿಗೆ ವಸತಿ ವ್ಯವಸ್ಥೆ ದೊಮ್ಮಸಂದ್ರದಲ್ಲಿಯೇ ಕಲ್ಪಿಸಲಾಗುವುದು.

ಈ ಮೂಲಕ ರಾಜ್ಯ ಆರೋಗ್ಯ ಸೇವೆಯ ಸುಧಾರಣೆಗಾಗಿ ಸರ್ಕಾರ ಕೈಗೊಂಡಿರುವ ಪ್ರಮುಖ ಹೆಜ್ಜೆಯಾಗಿದೆ, ಎಂದು ದಿನೇಶ್ ಗುಂಡೂರಾವ್ ಹೇಳಿದರು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!

You cannot copy content of this page