
Chikkaballapur : ಚಿಕ್ಕಬಳ್ಳಾಪುರ ನಗರದ ಕಂದವಾರ ಟೀಚರ್ಸ್ ಕಾಲೋನಿಯಲ್ಲಿರುವ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಅವರ ಗೃಹ ಕಚೇರಿ ಮೇಲೆ ಮಂಗಳವಾರ ರಾತ್ರಿ ಕಿಡಿಗೇಡಿಗಳು ಕಲ್ಲು ತೂರಿದ್ದು (stone pelting) ಕಿಟಕಿಯೊಂದರ ಗಾಜು ಒಡೆದಿದೆ.
ಮಂಗಳವಾರ ರಾತ್ರಿ 10.30ರಿಂದ 11ರ ವೇಳೆ ಯಾರೊ ದುಷ್ಕರ್ಮಿಗಳು ಮನೆಯ ಹಿಂಭಾಗದಲ್ಲಿ ಕಲ್ಲು ಎಸೆಯುವ ಶಬ್ದ ಕೇಳಿಸಿತು. ನಾವು ಸ್ಥಳಕ್ಕೆ ಹೋಗಿ ನೋಡಿದಾಗ ಮೂವರು ಅಪರಿಚಿತರು ದ್ವಿಚಕ್ರ ವಾಹನಗಳಲ್ಲಿ ಕಲ್ಲುಗಳೊಂದಿಗೆ ಬಂದಿದ್ದರು ಎಂದು ಶಾಸಕರ ಮನೆಯ ಕೆಲಸಗಾರರು ದೂರಿನಲ್ಲಿ ತಿಳಿಸಿದ್ದಾರೆ.
ಸ್ಥಳಕ್ಕೆ ಚಿಕ್ಕಬಳ್ಳಾಪುರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಪೊಲೀಸ್ ಭದ್ರತೆ ಒದಗಿಸಲಾಗಿದೆ.
For Daily Updates WhatsApp ‘HI’ to 7406303366
The post ಶಾಸಕ ಪ್ರದೀಪ್ ಈಶ್ವರ್ ಮನೆ ಮೇಲೆ ಕಲ್ಲು ತೂರಾಟ appeared first on Chikkaballapur | Chikballapur | Chikkaballapura | ಚಿಕ್ಕಬಳ್ಳಾಪುರ.