back to top
23.3 C
Bengaluru
Tuesday, September 16, 2025
HomeBusinessMetro ticket ದರ ಇಳಿಕೆ: CMಗೆ BJP ಸಂಸದರ ಭರವಸೆ

Metro ticket ದರ ಇಳಿಕೆ: CMಗೆ BJP ಸಂಸದರ ಭರವಸೆ

- Advertisement -
- Advertisement -

Bengaluru: ಮೆಟ್ರೋ ಪ್ರಯಾಣ ದರ (Metro ticket) ಹೆಚ್ಚಳದಿಂದ bengaluru ಜನರು ಕಂಗೆಟ್ಟಿದ್ದು, BMRCL ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ನಡುವೆ ರಾಜ್ಯ ಬಿಜೆಪಿ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, ಮೆಟ್ರೋ ದರ ಇಳಿಕೆ ಬಗ್ಗೆ ಚರ್ಚೆ ನಡೆಸಿತು.

“ಮೆಟ್ರೋ ದರ ಸಂಬಂಧ ನೀವು ದರ ನಿಗದಿ ಸಮಿತಿಗೆ ಮತ್ತೊಂದು ಪತ್ರ ಬರೆಯಿರಿ. ನಾವು ಮೂರೂ ಜನ ಸಂಸದರು ಸೇರಿಕೊಂಡು ಮೂರು ದಿನಗಳಲ್ಲಿ ದರ ಇಳಿಕೆ ಮಾಡಿಸುತ್ತೇವೆ” ಎಂದು ಸಂಸದ ತೇಜಸ್ವಿ ಸೂರ್ಯ ಸಿಎಂ ಸಿದ್ದರಾಮಯ್ಯಗೆ ಭರವಸೆ ನೀಡಿದರು. ಇದಕ್ಕೆ ಪ್ರತಿಯಾಗಿ, ಸಿಎಂ ಸಿದ್ದರಾಮಯ್ಯ “BMRCL ಎಂಡಿ ಜೊತೆ ಚರ್ಚಿಸುತ್ತೇನೆ, ಸಮಿತಿಗೆ ಮತ್ತೊಂದು ಪತ್ರ ಬರೆಯಲು ಸೂಚಿಸುತ್ತೇನೆ” ಎಂದು ಹೇಳಿದರು.

ಬಿಜೆಪಿ ನಿಯೋಗ ಪ್ರತಿ ಕ್ಷೇತ್ರಕ್ಕೆ 150 ಕೋಟಿ ರೂ. ಅನುದಾನ ನೀಡುವಂತೆ ಮನವಿ ಮಾಡಿತು. ಇದಕ್ಕೆ ಸಿಎಂ ಸಿದ್ದರಾಮಯ್ಯ “ಬಜೆಟ್ ನಲ್ಲಿ ಅನುದಾನ ಹಂಚಿಕೆ ಕುರಿತು ಪರಿಶೀಲಿಸುತ್ತೇನೆ. ಈಗಾಗಲೇ ಪ್ರತಿ ಕ್ಷೇತ್ರಕ್ಕೂ ಗ್ಯಾರಂಟಿ ಯೋಜನೆಗೆ 250 ಕೋಟಿ ರೂ. ನೀಡಲಾಗುತ್ತಿದೆ” ಎಂದು ಸ್ಪಷ್ಟಪಡಿಸಿದರು.

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ, ಬಿಜೆಪಿ ನಾಯಕರು ಸಿಎಂಗೆ ಮನವಿ ಸಲ್ಲಿಸಿದರು. ರಾಜ್ಯದ ಎಲ್ಲಾ ಬಿಜೆಪಿ ಶಾಸಕರು ಅನುದಾನ ಇಲ್ಲದೆ ಪರದಾಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದರು. ಮೆಟ್ರೋ ದರ ಏರಿಕೆಗೆ ಜನರು ವಿರೋಧ ವ್ಯಕ್ತಪಡಿಸಿದ್ದು, ಹೋರಾಟಕ್ಕೂ ಮುಂದಾಗಿದ್ದಾರೆ ಎಂದರು.

ಈ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಸಂಸದರಾದ ಪಿ.ಸಿ. ಮೋಹನ್, ತೇಜಸ್ವಿ ಸೂರ್ಯ, ಶಾಸಕರಾದ ರಾಮಮೂರ್ತಿ, ಭೈರತಿ ಬಸವರಾಜ, ಕೆ.ಗೋಪಾಲಯ್ಯ, ಎಂ.ಕೃಷ್ಣಪ್ಪ, ಎಸ್.ಆರ್. ವಿಶ್ವನಾಥ್, ಮುನಿರತ್ನ ಮತ್ತು ಇತರರು ಪಾಲ್ಗೊಂಡಿದ್ದರು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!

You cannot copy content of this page