New Delhi: ತಮಿಳುನಾಡು ಸರ್ಕಾರದ ಬಜೆಟ್ ದಾಖಲೆಯಲ್ಲಿ ರೂ. ಚಿಹ್ನೆ ‘₹’ ಬದಲಾಗಿ ತಮಿಳು ಪದ ‘ರು’ ಬಳಸಿರುವುದಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಮಿಳುನಾಡು ಸರ್ಕಾರದ ಈ ನಿರ್ಧಾರ”ರಾಷ್ಟ್ರೀಯ ಏಕತೆಯನ್ನು ದುರ್ಬಲಗೊಳಿಸುವ ಅಪಾಯಕಾರಿ ಮನಸ್ಥಿತಿ” ಎಂದು ಅವರು ಆರೋಪಿಸಿದ್ದಾರೆ.
ಸಿಎಂ ಎಂಕೆ ಸ್ಟಾಲಿನ್ ನೇತೃತ್ವದ ಸರ್ಕಾರ “ಪ್ರಾದೇಶಿಕ ಹೆಮ್ಮೆ ಹೆಸರಿನಲ್ಲಿ ಪ್ರತ್ಯೇಕತಾವಾದವನ್ನು ಉತ್ತೇಜಿಸುತ್ತಿದೆ” ಎಂದು ಅವರು ಆರೋಪಿಸಿದ್ದಾರೆ. ರೂಪಾಯಿ ಚಿಹ್ನೆ ಕೈಬಿಟ್ಟ ಕಾರಣ ಬಿಜೆಪಿಯು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಈ ಹಿನ್ನಲೆಯಲ್ಲಿ ಸೀತಾರಾಮನ್ ಈ ಹೇಳಿಕೆ ನೀಡಿದ್ದಾರೆ.