Bengaluru: IPL ಫೈನಲ್ ನಲ್ಲಿ (IPL Final) ಯಾವ ತಂಡ ಗೆದ್ದರೂ ಸಂಭ್ರಮಾಚರಣೆಗಳು ಕಾನೂನಿನ ಅಡಿಯಲ್ಲಿ ನಡೆಯಬೇಕು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.
ಅಹಮದಾಬಾದಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಇಂದು ಸಂಜೆ 7:30ಕ್ಕೆ ಫೈನಲ್ ಪಂದ್ಯ ನಡೆಯಲಿದೆ. ನಗರದಲ್ಲಿ ಹಲವೆಡೆ ಸ್ಕ್ರೀನಿಂಗ್ ವ್ಯವಸ್ಥೆ ಮಾಡಲಾಗಿದೆ. ನಗರದಲ್ಲಿ ಕಟ್ಟೆಚ್ಚರ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಬೆಟ್ಟಿಂಗ್ ಮತ್ತು ಇತರ ಕಾನೂನು ವಿರುದ್ಧ ಚಟುವಟಿಕೆಗಳ ಮೇಲೆ ಕಠಿಣ ನಿಗಾವಹಿಸಲಾಗಿದೆ. ಪಂದ್ಯಕ್ಕೆ ನಂತರ ಯಾವುದೇ ಕಾನೂನು ಉಲ್ಲಂಘನೆ ನಡೆದರೆ ಅದು ತಡೆಯಬೇಕು ಎಂದು ಆಯುಕ್ತರು ತಿಳಿಸಿದ್ದಾರೆ.