back to top
21.4 C
Bengaluru
Friday, October 10, 2025
HomeChikkaballapuraSidlaghattaವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮ

ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮ

- Advertisement -
- Advertisement -

Sidlaghatta : ದಿನನಿತ್ಯ ಯೋಗಾಭ್ಯಾಸ ಮಾಡುವುದರಿಂದ ದೈಹಿಕವಾಗಿ ಸಮತೋಲನ ಕಾಪಾಡಿಕೊಳ್ಳುವುದರ ಜೊತೆಗೆ, ಮಾನಸಿಕವಾಗಿ ನೆಮ್ಮದಿಯನ್ನು ಕಾಣಲು ಸಾಧ್ಯವಾಗುತ್ತದೆ. ಕ್ರೀಯಾಶೀಲತೆ ಹಾಗೂ ದಿನನಿತ್ಯ ಚಟುವಟಿಕೆಯಿಂದ ಇರಲು ಯೋಗ ಸಹಕಾರಿಯಾಗಿರುತ್ತದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಮೊಹಮ್ಮದ್ ರೋಷನ್ ಷಾ ತಿಳಿಸಿದರು.

ನಗರದ ನ್ಯಾಯಾಲಯದ ಆವರಣದಲ್ಲಿ ಶನಿವಾರ ತಾಲ್ಲೂಕು ಕಾನೂನು ಸೇವಾ ಸಮಿತಿ ವತಿಯಿಂದ ಏರ್ಪಡಿಸಲಾಗಿದ್ದ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಯೋಗಾಭ್ಯಾಸವೆಂಬುದು ಕೇವಲ ಆಸನ ಅಥವಾ ಪ್ರಾಣಾಯಾಮಗಳಿಗೆ ಮೀಸಲಾಗದೇ ಭೌದ್ಧಿಕ ಮತ್ತು ಅಧ್ಯಾತ್ಮಿಕ ಬೆಳವಣಿಗೆಯ ಹಾದಿಯಾಗಿದೆ. ಆರೋಗ್ಯವಂತ ಸಮಾಜಕ್ಕಾಗಿ ಪ್ರತಿಯೊಬ್ಬರೂ ತಮ್ಮ ಜೀವನದುದ್ದಕ್ಕೂ ಯೋಗವನ್ನು ಒಂದು ಹವ್ಯಾಸವನ್ನಾಗಿ ಮಾಡಿಕೊಳ್ಳುವ ಮೂಲಕ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಸುಕನ್ಯಾ.ಸಿ.ಎಸ್., ಹೆಚ್ಚುವರಿ ಸಿವಿಲ್ ನ್ಯಾಯಾದೀಶರಾದ ರಂಜಿತಾ.ಎಸ್., ಯೋಗ ಶಿಕ್ಷಕ ರಾಜಮೋಹನ್, ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಎ.ನಾರಾಯಣಸ್ವಾಮಿ, ಪ್ರಧಾನ ಕಾರ್ಯದರ್ಶಿ ಭಾಸ್ಕರ್, ನ್ಯಾಯಾಲಯ ಸಿಬ್ಬಂದಿ ಹಾಗೂ ವಕೀಲರು ಹಾಜರಿದ್ದರು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!

You cannot copy content of this page