Home Karnataka ಕಿತ್ತೂರಿನಲ್ಲಿ ಅಕ್ಟೋಬರ್ 23ರಿಂದ ಅದ್ದೂರಿ ಉತ್ಸವ

ಕಿತ್ತೂರಿನಲ್ಲಿ ಅಕ್ಟೋಬರ್ 23ರಿಂದ ಅದ್ದೂರಿ ಉತ್ಸವ

21
Minister Satish Jarkiholi

ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ಅಕ್ಟೋಬರ್ 23, 24 ಮತ್ತು 25ರಂದು ಕಿತ್ತೂರು ಉತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುತ್ತದೆ. ಈ ಬಾರಿ ನಾಡಿನ ಹೆಸರಾಂತ ವ್ಯಕ್ತಿಯ ಕೈಯಿಂದ ಉತ್ಸವ ಉದ್ಘಾಟನೆ ನಡೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಉತ್ಸವ ಪೂರ್ವಭಾವಿ ಸಭೆಯ ಬಳಿಕ ಸಚಿವರು ಮಾಧ್ಯಮಗಳ ಜೊತೆ ಮಾತನಾಡಿ, 17 ಸಮಿತಿಗಳನ್ನು ರಚಿಸಲಾಗಿದೆ ಮತ್ತು ಮೂರು ಸಭೆಗಳ ಬಳಿಕ ಉತ್ಸವಕ್ಕೆ ಅಂತಿಮ ರೂಪ ನೀಡಲಾಗುವುದು ಎಂದರು. ಹೊಸ ಕಲಾವಿದರಿಗೆ ಅವಕಾಶ ನೀಡುವ ನಿರ್ಧಾರ ಕೈಗೊಳ್ಳಲಾಗಿದೆ. ಶಾಸಕ ಬಾಬಾಸಾಹೇಬ ಪಾಟೀಲರ ನೇತೃತ್ವದಲ್ಲಿ ಉತ್ಸವ ಯಶಸ್ವಿಯಾಗಿ ನಡೆಯಲಿದೆ.

ಸಂಗೊಳ್ಳಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಹೆಚ್ಚು ಅನುದಾನ ನೀಡಿರುವ ಬಗ್ಗೆ ಸಚಿವರು ಸ್ಪಷ್ಟನೆ ನೀಡುತ್ತಾ, ಮುಂದಿನ ದಿನಗಳಲ್ಲಿ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೂ ಹೆಚ್ಚಿನ ಅನುದಾನ ಕೊಡಿಸಲು ಪ್ರಯತ್ನಿಸಲಾಗುತ್ತದೆ ಎಂದರು. ತಾರತಮ್ಯ ಇಲ್ಲ, ಎಲ್ಲವೂ ಮುಖ್ಯಮಂತ್ರಿಗಳ ಅಧೀನದಲ್ಲೇ ಇವೆ ಎಂದು ಹೇಳಿದರು.

ಈ ಬಾರಿ ಮೆರವಣಿಗೆ ಮಧ್ಯಾಹ್ನ 12ಕ್ಕೆ ಪ್ರಾರಂಭವಾಗಲಿದೆ. ಹೊಸ ಸಾಹಿತಿ, ಕಲಾವಿದರಿಗೆ ಅವಕಾಶ ಸಿಗಲಿದೆ. ಐದು ಕೋಟಿ ರೂಪಾಯಿ ಅನುದಾನ ಈ ವರ್ಷವೂ ನೀಡಲಾಗುತ್ತಿದೆ. ನಗರ ಸೌಂದರ್ಯೀಕರಣ, ಕೋಟೆ ಅಭಿವೃದ್ಧಿ, ಹೊಸ ವೇದಿಕೆ ನಿರ್ಮಾಣ ಸೇರಿದಂತೆ ಹಲವು ಕಾಮಗಾರಿಗಳು ನಡೆಯುತ್ತಿವೆ. ಈ ಬಾರಿ ಜ್ಯೋತಿ ಕಿತ್ತೂರು ಕರ್ನಾಟಕ ಜಿಲ್ಲೆಗಳಲ್ಲಿ ಸಂಚರಿಸಲಿದೆ.

ಶಾಸಕ ಬಾಬಾಸಾಹೇಬ ಪಾಟೀಲ ಹೇಳಿದರು — ಉತ್ಸವದಲ್ಲಿ ಸ್ಥಳೀಯ ಕಲಾವಿದರಿಗೆ ಸಿಂಹಪಾಲು ನೀಡಲಾಗುತ್ತದೆ. ಹೊಸ ರೂಪಕ ವಾಹನಗಳ ಬದಲಾವಣೆ, ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆ ಮತ್ತು ಕಿತ್ತೂರು ಇತಿಹಾಸದ ಪುಸ್ತಕ ಬಿಡುಗಡೆ ನಡೆಯಲಿದೆ.

ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮಾಹಿತಿ ನೀಡಿ, ವೀರರಾಣಿ ಚನ್ನಮ್ಮನ ತವರೂರು ಕಾಕತಿ ವಾಡೆಯ ಭೂಸ್ವಾಧೀನ ಪ್ರಕ್ರಿಯೆ ಪ್ರಗತಿಯಲ್ಲಿದೆ. 3 ಕೋಟಿ ವೆಚ್ಚದಲ್ಲಿ ಮೂರ್ನಾಲ್ಕು ತಿಂಗಳಲ್ಲಿ ಕಾರ್ಯರೂಪಕ್ಕೆ ಬರಲಿದೆ ಎಂದರು.

ಕಿತ್ತೂರು ಕಲ್ಮಠದ ರಾಜಯೋಗಿಂದ್ರ ಸ್ವಾಮೀಜಿ ಹೇಳಿದರು — ಬ್ರಿಟಿಷರ ವಿರುದ್ಧದ ವಿಜಯೋತ್ಸವಕ್ಕೆ 201 ವರ್ಷ ಪೂರೈಸಿರುವ ಈ ಸಂದರ್ಭದಲ್ಲಿ ಪ್ರವಾಸಿಗರನ್ನು ಸೆಳೆಯಲು ಶಾಶ್ವತ ಅಭಿವೃದ್ಧಿ ಅಗತ್ಯವಾಗಿದೆ.

ಸಾರ್ವಜನಿಕರು ವೀರಜ್ಯೋತಿ ರಾಜ್ಯಾದ್ಯಂತ ಸಂಚರಿಸಬೇಕು, ಮೂಲಸೌಕರ್ಯ ಅಭಿವೃದ್ಧಿ, ಚರಂಡಿ ಸ್ವಚ್ಛತೆ ಮತ್ತು ಕಚೇರಿಗಳ ಸ್ಥಳಾಂತರ ಸೇರಿದಂತೆ ಹಲವು ಸಲಹೆಗಳನ್ನು ನೀಡಿದರು. ಯುವ ಮುಖಂಡರು ರಸ್ತೆ ಅಗಲೀಕರಣ ಮತ್ತು ಸ್ವಚ್ಛತಾ ಕಾರ್ಯದ ಅಗತ್ಯವನ್ನು ತಿಳಿಸಿದರು.

ಸಚಿವ ಸತೀಶ್ ಜಾರಕಿಹೊಳಿ ಅವರು ಶಾಸಕ ಬಾಬಾಸಾಹೇಬ ಪಾಟೀಲ ಪ್ರಕಟಿಸಿದ ‘ನಮ್ಮ ಚಿತ್ತ ಶತಕದತ್ತ’ ಎಂಬ ಕೈಪಿಡಿಯನ್ನು ಬಿಡುಗಡೆಗೊಳಿಸಿದರು.

ಸಭೆಯಲ್ಲಿ ಅಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರು ಭಾಗವಹಿಸಿ ಉತ್ಸವ ಯಶಸ್ಸಿಗೆ ಸಹಕಾರ ನೀಡಿದರು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

You cannot copy content of this page