HomeKarnatakaಸರ್ಕಾರಿ ಜಾಗದಲ್ಲಿ RSS ಚಟುವಟಿಕೆ ನಿಷೇಧದ ಸುಳಿವು

ಸರ್ಕಾರಿ ಜಾಗದಲ್ಲಿ RSS ಚಟುವಟಿಕೆ ನಿಷೇಧದ ಸುಳಿವು

- Advertisement -
- Advertisement -

Mysuru: ಕರ್ನಾಟಕದಲ್ಲಿ ಸರ್ಕಾರಿ ಜಾಗಗಳಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಚಟುವಟಿಕೆಗಳನ್ನು ನಿಷೇಧಿಸಬೇಕೆಂಬ ಬೇಡಿಕೆಗಳು ಹೆಚ್ಚಾಗಿವೆ. ಇದರ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಪರೋಕ್ಷವಾಗಿ ಮಹತ್ವದ ಸುಳಿವು ನೀಡಿದ್ದಾರೆ. ಇದರಿಂದ ಸರ್ಕಾರಿ ಜಾಗದಲ್ಲಿ RSS ಚಟುವಟಿಕೆ ನಿಷೇಧ almost ಖಚಿತ ಎಂದು ಹೇಳಲಾಗುತ್ತಿದೆ.

ಮೈಸೂರಿನಲ್ಲಿ ನಡೆದ ಬೌದ್ಧ ಮಹಾಸಮ್ಮೇಳನದ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಹೇಳಿದರು, “ತಮಿಳುನಾಡಿನಲ್ಲಿ ಸರ್ಕಾರಿ ಜಾಗಗಳಲ್ಲಿ RSS ಚಟುವಟಿಕೆ ನಿಷೇಧಿಸಲಾಗಿದೆ. ಅದೇ ರೀತಿಯಲ್ಲಿ ಕರ್ನಾಟಕದಲ್ಲೂ ಕ್ರಮ ಕೈಗೊಳ್ಳುವ ವಿಚಾರ ಪರಿಗಣನೆಯಲ್ಲಿ ಇದೆ. ತಮಿಳುನಾಡಿನ ಆದೇಶದ ವರದಿಯನ್ನು ತರಿಸಿಕೊಳ್ಳಲು ಹೇಳಿದ್ದೇನೆ,” ಎಂದರು.

“ತಮಿಳುನಾಡಿನ ವರದಿಯನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿ ಪರಿಶೀಲಿಸಿದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ,” ಎಂದು ಸ್ಪಷ್ಟಪಡಿಸಿದರು.

ಸಚಿವ ಪ್ರಿಯಾಂಕ್ ಖರ್ಗೆಗೆ ಬಂದಿರುವ ಬೆದರಿಕೆ ವಿಚಾರಕ್ಕೂ ಸಿಎಂ ಪ್ರತಿಕ್ರಿಯಿಸಿ, “ದುಷ್ಟ ಶಕ್ತಿಗಳು ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಹಾಕುತ್ತಿವೆ. ಆದರೆ ಅವರು ಕೂಡ ಜಗ್ಗಲ್ಲ, ನಾವು ಕೂಡ ಜಗ್ಗಲ್ಲ. ಅವರ ಪತ್ರದಲ್ಲಿ ತಪ್ಪೇನಿದೆ?” ಎಂದು ಪ್ರಶ್ನಿಸಿದರು. ಅದೇ ಸಮಯದಲ್ಲಿ, “ಪ್ರಿಯಾಂಕ್ ಖರ್ಗೆಯ ಪತ್ರವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ,” ಎಂದರು.

ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ, “ಬಿಜೆಪಿ ಯಾವಾಗಲೂ ‘ಬ್ಯಾನ್ ಮಾಡಿ’ ಎಂದು ಧೈರ್ಯ ತೋರಿಸಲು ಹೇಳುತ್ತದೆ. ಆದರೆ ಕಳೆದ ಚುನಾವಣೆಯ ನಂತರ ಏನಾಯ್ತು ಎಂಬುದು ಎಲ್ಲರಿಗೂ ಗೊತ್ತಿದೆ,” ಎಂದು ಕಟುವಾಗಿ ಟೀಕಿಸಿದರು.

ಬೆಂಗಳೂರಿನಲ್ಲಿ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು, “ಬೆದರಿಕೆ ಕರೆಗಳ ಬಗ್ಗೆ ಗೃಹಮಂತ್ರಿಗಳ ಜೊತೆ ಚರ್ಚೆ ಮಾಡಿ ದೂರು ನೀಡುತ್ತೇನೆ. ನಾನು ಯಾವ ಮಾತನ್ನಾದರೂ ಸಾಕ್ಷಿ ಪುರಾವೆಯಿಲ್ಲದೆ ಮಾತನಾಡುವುದಿಲ್ಲ. ಇದು ಬಿಜೆಪಿಯ ಸಂಸ್ಕೃತಿನಾ ಎಂಬ ಪ್ರಶ್ನೆಗೆ ಅವರು ಉತ್ತರಿಸಲಿ,” ಎಂದರು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!