back to top
20.4 C
Bengaluru
Monday, January 26, 2026
HomeKarnatakaChikkaballapuraವಿದ್ಯಾರ್ಥಿಗಳು ಅಂಬೇಡ್ಕರ್ ರೀತಿಯಲ್ಲಿ ಅಧ್ಯಯನಶೀಲರಾಗಿ, ಉನ್ನತ ಸಾಧನೆ ಮಾಡಿ

ವಿದ್ಯಾರ್ಥಿಗಳು ಅಂಬೇಡ್ಕರ್ ರೀತಿಯಲ್ಲಿ ಅಧ್ಯಯನಶೀಲರಾಗಿ, ಉನ್ನತ ಸಾಧನೆ ಮಾಡಿ

- Advertisement -
- Advertisement -

Chikkaballapur : ವಿದ್ಯಾರ್ಥಿಗಳು ಡಾ. ಬಿ.ಆರ್. ಅಂಬೇಡ್ಕರ್ ಅವರ ರೀತಿಯಲ್ಲಿ ನಿರಂತರ ಅಧ್ಯಯನಶೀಲರಾಗಬೇಕು. ಆ ಮೂಲಕ ವಿದ್ಯಾವಂತರಾಗುವ ಜೊತೆಗೆ ಉನ್ನತ ಸಾಧನೆಗಳನ್ನು ಮಾಡುವ ಮೂಲಕ ಸಮಾಜಕ್ಕೆ ಕೊಡುಗೆ ನೀಡಬೇಕು ಎಂದು ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಅವರು ಸಲಹೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಸಮಾಜ ಕಲ್ಯಾಣ ಇಲಾಖೆ ಆಶ್ರಯದಲ್ಲಿ ನಗರದ ಜೈ ಭೀಮ್ ವಿದ್ಯಾರ್ಥಿ ನಿಲಯದ ಆವರಣದಲ್ಲಿ ಆಯೋಜಿಸಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ 69ನೇ ಮಹಾ ಪರಿನಿರ್ವಾಣ ದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಶಿಕ್ಷಣದ ಮಹತ್ವ:

ಯಾವುದೇ ವ್ಯಕ್ತಿ ಶಿಕ್ಷಣ ಪಡೆದು ಬುದ್ಧಿವಂತನಾದರೆ, ಆತನಿಗೆ ಮೋಸ ಮಾಡುವ ಪ್ರಯತ್ನವನ್ನು ಇತರರು ಮಾಡಲಾರರು. ಕೇವಲ ವಿದ್ಯಾವಂತರಾಗುವುದರಿಂದಲೇ ಜೀವನದ ಅರ್ಧ ಸಮಸ್ಯೆಗಳು ಪರಿಹಾರವಾಗುತ್ತವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು. ಶಿಕ್ಷಣ ಪಡೆದವರು ಹುಲಿ ಹಾಲನ್ನು ಕುಡಿದವರಂತೆ ಶಕ್ತಿವಂತರು ಮತ್ತು ಯುಕ್ತಿವಂತರು ಆಗುತ್ತಾರೆಂಬ ಮಾತಿದೆ. ಹಾಗಾಗಿ ವಿದ್ಯಾರ್ಥಿಗಳು ಸಮಯವನ್ನು ವ್ಯರ್ಥ ಮಾಡಬಾರದು, ಅನಗತ್ಯವಾಗಿ ಮೊಬೈಲ್ ಬಳಸುವುದನ್ನು ನಿಲ್ಲಿಸಿ ನಿರಂತರವಾಗಿ ಶೈಕ್ಷಣಿಕ ಸಾಧನೆಗೆ ಮುಂದಾಗಬೇಕು ಎಂದು ಸಲಹೆ ನೀಡಿದರು.

ಮಹಾತ್ಮರ ಕೊಡುಗೆ:

ಸಾಮಾನ್ಯವಾಗಿ ವ್ಯಕ್ತಿಗಳು ಮೃತರಾದರೆ ವೈಕುಂಠ ಸಮಾರಾಧನೆ ಅಥವಾ ಶಿವಗಣಾರಾಧನೆ ಮಾಡುತ್ತಾರೆ. ಆದರೆ, ದೇಶಕ್ಕೆ ಕೊಡುಗೆ ನೀಡಿದ ಮಹಾತ್ಮರು ಮೃತರಾದರೆ ಅದನ್ನು ‘ಮಹಾ ಪರಿನಿರ್ವಾಣ ದಿನ’ ಎಂದು ಆಚರಿಸುತ್ತೇವೆ. ಅಂತಹ ಮಹಾತ್ಮರಿಗೆ ಸಾವಿಲ್ಲ ಎಂದರು.

ಅಂಬೇಡ್ಕರ್ ಅವರ ಜ್ಞಾನ ಮತ್ತು ಸರಳತೆ:

ಅಂಬೇಡ್ಕರ್ ಅವರ ಅಪರಿಮಿತ ಜ್ಞಾನಕ್ಕೆ ಅವರೇ ಸಾಟಿ. ನಾವೆಲ್ಲ ಒಂದೆರಡು ಪದವಿ ಪಡೆದರೆ ಅಹಂ ಬರುತ್ತದೆ. ಆದರೆ, ಅನೇಕ ವಿಶ್ವವಿದ್ಯಾಲಯಗಳಲ್ಲಿ ಅತ್ಯುನ್ನತ ಪದವಿಗಳನ್ನು ಪಡೆದಿದ್ದ ಅಂಬೇಡ್ಕರ್ ಅವರಿಗೆ ಯಾವುದೇ ರೀತಿಯ ಅಹಂ ಇರಲಿಲ್ಲ. ಬದಲಾಗಿ, ಬದುಕಿನ ಕೊನೆಯವರೆಗೂ ಅಧ್ಯಯನಶೀಲರಾಗಿದ್ದರು ಎಂದು ಸ್ಮರಿಸಿದರು. ಅಂಬೇಡ್ಕರ್ ಅವರ ತತ್ವ ಚಿಂತನೆಗಳ ಬೆಳಕಿನಲ್ಲಿ ಇಂದು ದೇಶವು ಸಮರ್ಥವಾಗಿ ಮುಂದುವರೆಯುತ್ತಿದೆ ಎಂದು ಪ್ರಶಂಸಿಸಿದರು.

ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಹಾಗೂ ಗಣ್ಯರು ಜೈ ಭೀಮ್ ವಿದ್ಯಾರ್ಥಿನಿಲಯದ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಹಾಗೂ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಶಿಕ್ಷಕ ಜಗದೀಶ್ ಮುಗಳಿ ಅವರು ಅಂಬೇಡ್ಕರ್ ಅವರ ಜೀವನ, ಹೋರಾಟ ಮತ್ತು ಕೊಡುಗೆಗಳ ಬಗ್ಗೆ ವಿವರಿಸಿದರು. ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ವೈ. ನವೀನ್ ಭಟ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಎನ್. ಭಾಸ್ಕರ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ತೇಜಾನಂದರೆಡ್ಡಿ ಸೇರಿದಂತೆ ಹಲವು ಅಧಿಕಾರಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

For Daily Updates WhatsApp ‘HI’ to 7406303366

The post ವಿದ್ಯಾರ್ಥಿಗಳು ಅಂಬೇಡ್ಕರ್ ರೀತಿಯಲ್ಲಿ ಅಧ್ಯಯನಶೀಲರಾಗಿ, ಉನ್ನತ ಸಾಧನೆ ಮಾಡಿ appeared first on Chikkaballapur | Chikballapur | Chikkaballapura Latest Breaking New Stories | ಚಿಕ್ಕಬಳ್ಳಾಪುರ ಸುದ್ದಿ.

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!

You cannot copy content of this page