back to top
26.1 C
Bengaluru
Tuesday, January 13, 2026
HomeEntertainmentವಿಷ್ಣುವರ್ಧನ್‌ಗೆ ಕರ್ನಾಟಕ ರತ್ನ ನೀಡಲು ನಟಿಯರಿಂದ ಮನವಿ

ವಿಷ್ಣುವರ್ಧನ್‌ಗೆ ಕರ್ನಾಟಕ ರತ್ನ ನೀಡಲು ನಟಿಯರಿಂದ ಮನವಿ

- Advertisement -
- Advertisement -

Bengaluru: ಕನ್ನಡದ ಹಿರಿಯ ನಟಿಯರಾದ ಜಯಮಾಲಾ, ಶ್ರುತಿ ಮತ್ತು ಮಾಳವಿಕಾ ಅವಿನಾಶ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, ದಿವಂಗತ ಸಾಹಸಸಿಂಹ ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕೆಂದು ಮನವಿ ಮಾಡಿದ್ದಾರೆ.

ಇದೇ ಸಂದರ್ಭದಲ್ಲಿ, ಇತ್ತೀಚೆಗೆ ನಿಧನರಾದ ಪಂಚಭಾಷಾ ನಟಿ ಬಿ. ಸರೋಜಾ ದೇವಿ ಅವರ ಹೆಸರನ್ನು ಮಲ್ಲೇಶ್ವರಂನ ರಸ್ತೆಗೆ ಇಡುವಂತೆ ಕೂಡಾ ನಟಿಯರು ಮನವಿ ಸಲ್ಲಿಸಿದರು.

ಸಭೆಯ ನಂತರ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಟ್ವಿಟರ್‌ನಲ್ಲಿ ನಟಿಯರೊಂದಿಗೆ ತೆಗೆದ ಫೋಟೋ ಹಂಚಿಕೊಂಡು, ವಿಷ್ಣುವರ್ಧನ್ ಹಾಗೂ ಸರೋಜಾ ದೇವಿ ಕುರಿತ ಮನವಿಯನ್ನು ಸ್ವೀಕರಿಸಿರುವುದಾಗಿ ತಿಳಿಸಿದರು.

ನಟಿಯರು ತಮ್ಮ ಇನ್‌ಸ್ಟಾಗ್ರಾಂನಲ್ಲಿ ವಿಡಿಯೋ ಪೋಸ್ಟ್ ಮಾಡಿ, ವಿಷ್ಣುವರ್ಧನ್ ಅವರ 75ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಈ ಗೌರವ ನೀಡಬೇಕು ಎಂದು ಕೋರಿದರು. ಅವರು 200ಕ್ಕೂ ಹೆಚ್ಚು ಕನ್ನಡ, ತಮಿಳು, ತೆಲುಗು ಹಾಗೂ ಹಿಂದಿ ಚಿತ್ರಗಳಲ್ಲಿ ನಟಿಸಿ ಜನಮನ ಗೆದ್ದ ಕಲಾವಿದರಾಗಿ ಕನ್ನಡದ ಹೆಮ್ಮೆ ಎಂದರು.

ಅಲ್ಲದೇ, ಸರೋಜಾ ದೇವಿ ಅವರ ಕೊಡುಗೆಯನ್ನು ಸ್ಮರಿಸಿ, ಅವರಿಗೆ ಕರ್ನಾಟಕ ರತ್ನ ಬಿರುದನ್ನು ನೀಡಿ, ಮಲ್ಲೇಶ್ವರಂ ರಸ್ತೆಗೆ ಅವರ ಹೆಸರಿಡಬೇಕೆಂದು ಮನವಿ ಮಾಡಿದರು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!

You cannot copy content of this page