Home News Desi Seed Bank ಸ್ಥಾಪನೆಗೆ ಸರ್ಕಾರಕ್ಕೆ ಮನವಿ

Desi Seed Bank ಸ್ಥಾಪನೆಗೆ ಸರ್ಕಾರಕ್ಕೆ ಮನವಿ

Proposal to Setup Desi Seed Bank in Karnataka

Hubballi: ದೇಸಿ ಬೀಜ ಸಂರಕ್ಷಣೆಗೆ ಶ್ರಮಿಸುತ್ತಿರುವ ಉತ್ತರ ಕರ್ನಾಟಕ (North Karnataka) ಭಾಗದ ರೈತರ (farmers) ಗುಂಪೊಂದು ಹುಬ್ಬಳ್ಳಿಯಲ್ಲಿ ಸಭೆ ನಡೆಸಿದ್ದು, ಅಕಾಡೆಮಿ ಅಥವಾ ಸಂಸ್ಥೆಗಳಿಗೆ ಜವಾಬ್ದಾರಿ ನೀಡುವ ಬದಲು ಸಮುದಾಯ ಬೀಜ ಬ್ಯಾಂಕ್ ಗಳ (community desi seed banks) ಸ್ಥಾಪನೆಗೆ ರೈತರಿಗೆ ಅವಕಾಶ ಮಾಡಿಕೊಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲು ನಿರ್ಧರಿಸಿದ್ದಾರೆ.

ರಾಜ್ಯ ಸರ್ಕಾರ ತನ್ನ 2024 ರ ಬಜೆಟ್‌ನಲ್ಲಿ ಮೊದಲ ಬಾರಿಗೆ ದೇಸಿ ಬೀಜ ಸಂರಕ್ಷಿಸಲು ಮತ್ತು ಪ್ರಚಾರ ಮಾಡಲು ಹಣ ಮೀಸಲಿಡುವ ವಾಗ್ದಾನ ಮಾಡಿತ್ತು. ಈ ಅವಕಾಶದೊಂದಿಗೆ ಸಾವಿರಾರು ಬೆಳೆಗಳ ಬೀಜಗಳನ್ನು ಸಂರಕ್ಷಿಸಲು ರೈತರು ಗಮನ ಹರಿಸಿದ್ದಾರೆ.

ಸಹಜ ಸಮೃದ್ಧ ಸಂಸ್ಥೆಯ ನಿರ್ದೇಶಕ ಕೃಷ್ಣ ಪ್ರಸಾದ್, ತಂತ್ರಜ್ಞಾನ ಮತ್ತು ವಿವಿಧ ತಳಿಗಳನ್ನು ಅಭಿವೃದ್ಧಿಪಡಿಸಿದ ಅನೇಕ ರೈತರನ್ನು ಉದಾಹರಣೆಯಾಗಿ ನೀಡುವ ಮೂಲಕ ಕ್ರೆಡಿಟ್ ನ್ನು ಅಕಾಡೆಮಿಗಳು ದೋಚ್ಚುತ್ತಿವೆ ಎಂದು ವಾಗ್ದಾಳಿ ನಡೆಸಿದರು.

ಬೀಜ ಸಂರಕ್ಷಣೆಗೆ 5 ಕೋಟಿ ಮೀಸಲಿಡಲಾಗಿದೆ ಎಂದು ಕೃಷಿ ಸಚಿವ ಚಲುವರಾಯ ಸ್ವಾಮಿ ಹೇಳಿದ್ದಾರೆ. ಸಮುದಾಯಕ್ಕೆ ಅನುಕೂಲವಾಗುವಂತೆ ರೈತರಿಗೆ ಹಣ ನೀಡುವಂತೆ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದರು.

ಮಾಜಿ ಪತ್ರಕರ್ತ ಮತ್ತು ರೈತ ಆನಂದ ತೀರ್ಥ ಪಯಾಟಿ ಅವರು ಭತ್ತ, ಹತ್ತಿ ಮತ್ತು ಮೆಣಸಿನಕಾಯಿಯ ವಿಶೇಷ ತಳಿಗಳ ಕುರಿತು ವಿವರಿಸಿದರು. ಒಂದು ಕಾಲದಲ್ಲಿ ಹೇರಳವಾಗಿ ಬೆಳೆದ ಬ್ಯಾಡಗಿ ಮೆಣಸಿನಕಾಯಿಯನ್ನು ಜರ್ಮನಿಯಲ್ಲಿ ಲಿಪ್ ಸ್ಟಿಕ್ ತಯಾರಿಸಲು ಬಳಸಲಾಗುತ್ತಿತ್ತು. ಏಕೆಂದರೆ ಅವರು ಹಾನಿಕಾರಕವಲ್ಲದ ಸಸ್ಯ ಆಧಾರಿತ ಬಣ್ಣವನ್ನು ಬಯಸಿದ್ದರು.

ಇಂದಿಗೂ ಬ್ಯಾಡಗಿ ಮೆಣಸಿನಕಾಯಿಯನ್ನು ಕೇರಳಕ್ಕೆ ಕೊಂಡೊಯ್ದು ಕೆಂಪು ಬಣ್ಣವನ್ನು ಹೊರತೆಗೆಯಲಾಗುತ್ತದೆ. ದುರದೃಷ್ಟವಶಾತ್, ಕರ್ನಾಟಕದಲ್ಲಿ ಇಂತಹ ಸಂಸ್ಕರಣಾ ಘಟಕವನ್ನು ಸ್ಥಾಪಿಸಿಲ್ಲ ಎಂದರು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

You cannot copy content of this page

Exit mobile version