Home Karnataka ಮತಪತ್ರ ಬಳಕೆಗೆ ಕಾಯ್ದೆ ತಿದ್ದುಪಡಿ–ಸುಗ್ರೀವಾಜ್ಞೆ ಅಗತ್ಯತೆ ಬಗ್ಗೆ ಸರ್ಕಾರದಲ್ಲಿ ಚರ್ಚೆ

ಮತಪತ್ರ ಬಳಕೆಗೆ ಕಾಯ್ದೆ ತಿದ್ದುಪಡಿ–ಸುಗ್ರೀವಾಜ್ಞೆ ಅಗತ್ಯತೆ ಬಗ್ಗೆ ಸರ್ಕಾರದಲ್ಲಿ ಚರ್ಚೆ

State government

Bengaluru: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ EVM ಬದಲಿಗೆ ಮತಪತ್ರ ಬಳಸುವ ನಿಯಮ ತಿದ್ದುಪಡಿಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಬೇಕೇ ಎಂಬ ಪ್ರಶ್ನೆ ರಾಜ್ಯ ಸರ್ಕಾರಕ್ಕೆ ಗೊಂದಲ ಉಂಟುಮಾಡಿದೆ.

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಸಲು ಕಾಂಗ್ರೆಸ್ ಸರ್ಕಾರ ಈಗಾಗಲೇ ತೀರ್ಮಾನಿಸಿದೆ. ಆ ದಾರಿಯಲ್ಲಿ ನಾಲ್ಕು ಕಾಯ್ದೆಗಳಿಗೆ ತಿದ್ದುಪಡಿ ತರಲು ನಾಲ್ಕು ಕರಡು ಮಸೂದೆಗಳನ್ನು ಸಿದ್ಧಪಡಿಸಲಾಗಿದೆ. ಈ ತಿದ್ದುಪಡಿ ಇಲ್ಲದೆ ಚುನಾವಣಾ ಆಯೋಗಕ್ಕೆ ಸರ್ಕಾರ ಆದೇಶ ನೀಡಲು ಸಾಧ್ಯವಿಲ್ಲ.

ಮತಪತ್ರ ಬಳಕೆಯ ಕುರಿತು 2006ರಲ್ಲಿ ಕುಲದೀಪ್ ನಯ್ಯರ್ ವಿರುದ್ಧ ಕೇಂದ್ರ ಸರ್ಕಾರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು. ಇವಿಎಂ ಅಥವಾ ಮತಪತ್ರ ಬಳಸಿದರೂ ಗೌಪ್ಯತೆ ಕಾಪಾಡುವುದು ರಾಜ್ಯ ಸರ್ಕಾರದ ಜವಾಬ್ದಾರಿ ಎಂದು ಕೋರ್ಟ್ ಹೇಳಿತ್ತು. ಇದರಿಂದಾಗಿ ಸುಗ್ರೀವಾಜ್ಞೆ ಅಗತ್ಯವಿದೆಯೇ ಎಂಬ ಪ್ರಶ್ನೆ ಸಂಪುಟ ಸಭೆಯಲ್ಲಿ ಕೇಳಿಬಂದಿದೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರಿ ತಿದ್ದುಪಡಿ ಮಸೂದೆ, ಕರ್ನಾಟಕ ಪುರಸಭೆಗಳ ತಿದ್ದುಪಡಿ ಮಸೂದೆ, ಕರ್ನಾಟಕ ಮಹಾನಗರ ಪಾಲಿಕೆಗಳ ತಿದ್ದುಪಡಿ ಮಸೂದೆ, ಕರ್ನಾಟಕ ಗ್ರಾಮಸ್ವರಾಜ್ ಮತ್ತು ಪಂಚಾಯತ್ರಾಜ್ ತಿದ್ದುಪಡಿ ಮಸೂದೆ – ಇವುಗಳ ಕರಡು ಸಿದ್ಧವಾಗಿದೆ. ಮುಂದಿನ ಅಧಿವೇಶನದಲ್ಲಿ ಈ ಮಸೂದೆಗಳನ್ನು ಮಂಡಿಸಿ ಅಂಗೀಕರಿಸುವ ಬಗ್ಗೆ ಚರ್ಚೆ ನಡೆದಿದೆ.

ಸಿಎಂ ಸಿದ್ದರಾಮಯ್ಯ “ಇವಿಎಂ ಬದಲಿಗೆ ಬ್ಯಾಲೆಟ್ ಬಳಸಿ ಚುನಾವಣೆ ಮಾಡಬೇಕೆಂಬುದೇ ನಮ್ಮ ಉದ್ದೇಶ. ನಮ್ಮ ಅನುಭವ ಆಧರಿಸಿ ಈ ತೀರ್ಮಾನ ಕೈಗೊಂಡಿದ್ದೇವೆ” ಎಂದಿದ್ದಾರೆ.

ಡಿಸಿಎಂ ಡಿ.ಕೆ. ಶಿವಕುಮಾರ್ “ಮತಪತ್ರ ಬಳಸಿ ಚುನಾವಣೆಯ ನಿರ್ಧಾರ ತೆಗೆದುಕೊಂಡರೆ ಬಿಜೆಪಿಗೆ ಏಕೆ ಗಾಬರಿ?” ಎಂದು ಪ್ರಶ್ನಿಸಿದ್ದಾರೆ.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

You cannot copy content of this page

Exit mobile version