ಭಾರತದೊಂದಿಗಿನ ಉದ್ವಿಗ್ನ ಪರಿಸ್ಥಿತಿಯ ನಡುವೆ ಪಾಕಿಸ್ತಾನದ ಲಾಹೋರ್ ನಗರದಲ್ಲಿ ಭಾರಿ ಸ್ಫೋಟಗಳ ಶಬ್ದ ಕೇಳಿಬಂದಿದೆ. ಹಲವಾರು ಸ್ಫೋಟಗಳು ನಡೆದಿದ್ದು, (Explosions in the city of Lahore) ಶಬ್ದ ದೂರದವರೆಗೂ ಹರಡಿತ್ತು. ಪರಿಣಾಮವಾಗಿ ಲಾಹೋರ್ ವಿಮಾನ ನಿಲ್ದಾಣವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಸ್ಥಳದಲ್ಲಿ ಗೊಂದಲದ ಪರಿಸ್ಥಿತಿ ನಿರ್ಮಾಣವಾಗಿದೆ.
ಇದೇ ಸಮಯದಲ್ಲಿ, ಬುಧವಾರ ಬೆಳಗಿನ ಜಾವ ಭಾರತವು “ಆಪರೇಷನ್ ಸಿಂಧೂರ್” ಎಂಬ ಹೆಸರಿನ ಅಡಿ ಭಾರಿ ದಾಳಿ ನಡೆಸಿತು. ಈ ದಾಳಿಯಲ್ಲಿ ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯು ಭಾಗವಹಿಸಿದ್ದು, 100 ಕ್ಕೂ ಹೆಚ್ಚು ಭಯೋತ್ಪಾದಕರನ್ನು ನಾಶಮಾಡಲಾಗಿದೆ. ಈ ಕಾರ್ಯಾಚರಣೆ 25 ನಿಮಿಷಗಳಲ್ಲಿ ಮುಕ್ತಾಯಗೊಂಡಿದ್ದು, 21 ಗುರಿಗಳ ಮೇಲೆ ದಾಳಿ ಮಾಡಲಾಗಿದೆ.
ಪಾಕಿಸ್ತಾನ ಗಡಿಯಲ್ಲಿನ ಉದ್ವಿಗ್ನತೆಯ ಪರಿಣಾಮವಾಗಿ ಜಮ್ಮು ಮತ್ತು ಕಾಶ್ಮೀರದ ಸಾಂಬಾ, ಕಥುವಾ, ಮತ್ತು ಆರ್ಎಸ್ ಪುರ ಪ್ರದೇಶದಲ್ಲಿ ಮುಂದಿನ 72 ಗಂಟೆಗಳ ಕಾಲ ಎಚ್ಚರಿಕೆ ಘೋಷಿಸಲಾಗಿದೆ. ಅಮೃತಸರ ವಿಮಾನ ನಿಲ್ದಾಣವನ್ನು ಕೂಡ ಮುಚ್ಚಲಾಗಿದೆ.
ಇನ್ನೊಂದೆಡೆ, ಬಲೂಚಿಸ್ತಾನದ ಬೋಲಾನ್ ಎಂಬಲ್ಲಿ ಬಿಎಲ್ಎ ಎಂಬ ಸಂಘಟನೆ ಪಾಕಿಸ್ತಾನಿ ಸೇನಾ ವಾಹನದ ಮೇಲೆ ಐಇಡಿ ಬಾಂಬ್ ದಾಳಿ ನಡೆಸಿದ್ದು, 12 ಸೈನಿಕರು ಸಾವನ್ನಪ್ಪಿದ್ದಾರೆ.
ಈ ನಡುವೆ ಉಕ್ರೇನ್ ದೇಶವು ಭಾರತ ಮತ್ತು ಪಾಕಿಸ್ತಾನ ಎರಡೂ ರಾಷ್ಟ್ರಗಳನ್ನು ಶಾಂತಿ ಮತ್ತು ಸಂಯಮ ಕಾಯ್ದುಕೊಳ್ಳಲು ಮನವಿ ಮಾಡಿದೆ. ಪಾಕಿಸ್ತಾನದ ಇಸ್ಲಾಮಾಬಾದ್ ನಗರದಲ್ಲಿ ಜನರಿಗೆ ತಮ್ಮ ಮನೆಗಳಲ್ಲಿ ಇರುತ್ತಂತೆ ಹಾಗೂ ದೀಪಗಳನ್ನು ಆಫ್ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ.