Bandipora : ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ನಡೆದ ಎನ್ಕೌಂಟರ್ನಲ್ಲಿ, (Bandipora Encounter) ಲಷ್ಕರ್-ಎ-ತೊಯ್ಬಾ (ಎಲ್ಐಟಿ) ಸಂಘಟನೆಯ (Lashkar Commander) ಟಾಪ್ ಕಮಾಂಡರ್ ಅಲ್ತಾಫ್ ಲಲ್ಲಿ ಸಾವನ್ನಪ್ಪಿದ್ದಾನೆ. ಈ ಎನ್ಕೌಂಟರ್ ಭಾರತೀಯ ಸೇನೆಯ ಪ್ರಮುಖ ಸಾಧನೆಯಾಗಿದೆ.
ಏಪ್ರಿಲ್ 22 ರಂದು, ಪಹಲ್ಗಾಮ್ ನಲ್ಲಿ ಉಗ್ರರು ನಡೆಸಿದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ್ದರು. ಈ ದಾಳಿಯನ್ನು ಲಷ್ಕರ್-ಎ-ತೊಯ್ಬಾ ಸಂಘಟನೆ ನಡೆಸಿತ್ತು. ಇದೀಗ, ಭಾರತೀಯ ಸೇನೆ ಟಾಪ್ ಕಮಾಂಡರ್ ಅಲ್ತಾಫ್ ಅನ್ನು ಕೊಂದು, ತಮ್ಮ ಬಹುದೊಡ್ಡ ಬೇಟೆಯ ಸಾಧನೆ ಮಾಡಿದೆ.
ಭಯೋತ್ಪಾದಕರು ಬಂಡಿಪೋರಾದಲ್ಲಿ ಅಡಗಿರುವ ಬಗ್ಗೆ ಖಚಿತ ಮಾಹಿತಿ ದೊರಕಿದ ನಂತರ, ಸೇನೆ ಮತ್ತು ಜಮ್ಮು-ಕಾಶ್ಮೀರ ಪೊಲೀಸರು ಜಂಟಿಯಾಗಿ ಶೋಧ ಕಾರ್ಯಾಚರಣೆಯನ್ನು ಆರಂಭಿಸಿದರು. ಮೊದಲೇ ಉಗ್ರರು ಸೇನೆಯ ಮೇಲೆ ಗುಂಡು ಹಾರಿಸಿದ್ದರು, ಸೇನೆ ಪ್ರತಿಕ್ರಿಯೆವಾಗಿ ದಾಳಿ ನಡೆಸಿತು. ಆರಂಭಿಕ ಗುಂಡಿನ ಚಕಮಕಿಯಲ್ಲಿ ಒಂದು ಭಯೋತ್ಪಾದಕ ಗಾಯಗೊಂಡಿದ್ದಾನೆ.
ಈ ಎನ್ಕೌಂಟರ್ನ ವೇಳೆ, ಹಿರಿಯ ಅಧಿಕಾರಿಯ ವೈಯಕ್ತಿಕ ಭದ್ರತಾ ತಂಡದ ಇಬ್ಬರು ಪೊಲೀಸ್ ಸಿಬ್ಬಂದಿಯೂ ಗಾಯಗೊಂಡಿದ್ದಾರೆ. ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಶ್ರೀನಗರಕ್ಕೆ ಭೇಟಿ ನೀಡಿ, ಕಾರ್ಯಾಚರಣೆ ಕುರಿತು ಮಾಹಿತಿ ಪಡೆದು, ಭದ್ರತಾ ಪರಿಸ್ಥಿತಿಯ ಸಮಗ್ರ ಪರಿಶೀಲನೆ ನಡೆಸಲು ಮುಂದಾಗಿದ್ದಾರೆ.
ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಹಿನ್ನೆಲೆಯನ್ನು ಪರಿಹರಿಸಲು, ಪೋಲೀಸರ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ. 200ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದು, ವಿಚಾರಣೆ ನಡೆಯುತ್ತಿದೆ.