back to top
25.2 C
Bengaluru
Friday, July 18, 2025
HomeKarnatakaಉಳ್ಳಾಲದಲ್ಲಿ ಹಾಡಹಗಲೇ Bank robbery

ಉಳ್ಳಾಲದಲ್ಲಿ ಹಾಡಹಗಲೇ Bank robbery

- Advertisement -
- Advertisement -

Mangaluru: ಬೀದರ್ ಬಳಿಕ ಮಂಗಳೂರು ಸಮೀಪದ ಉಳ್ಳಾಲದಲ್ಲಿ ಹಾಡಹಗಲೇ ಬ್ಯಾಂಕ್ ದರೋಡೆ (Bank robbery) ನಡೆದಿದೆ. ದರೋಡೆಕೋರರು ಕೆಸಿ ರೋಡ್ ನ ಕೋಟೆಕಾರು ಬ್ಯಾಂಕ್ ನಲ್ಲಿ ಬಂದೂಕಿನಿಂದ ಬ್ಯಾಂಕ್ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ಬೆದರಿಸಿ ಚಿನ್ನಾಭರಣ ಹಾಗೂ ನಗದು ದೋಚಿದ್ದಾರೆ. ಬಳಿಕ ಕಾರಿನಲ್ಲಿ ಪರಾರಿಯಾಗಿದ್ದಾರೆ.

ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದ ಕಾರಣ ಹೆಚ್ಚಿನ ಪೊಲೀಸರು ಭದ್ರತೆಗೆ ಹಾಜರಾಗಿದ್ದರು. ಈ ಸಂದರ್ಭವನ್ನು ಬಳಸಿಕೊಂಡು ದರೋಡೆ ನಡೆದಿದ್ದು ಶಂಕೆ ವ್ಯಕ್ತವಾಗಿದೆ.

ಘಟನಾ ಸ್ಥಳಕ್ಕೆ ಉಳ್ಳಾಲ ಠಾಣೆ ಪೊಲೀಸರು ಮತ್ತು ಶ್ವಾನದಳ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. Banks ಗೆ ವಿಧಾನಸಭಾ ಸ್ಪೀಕರ್ ಯುಟಿ ಖಾದರ್ ಭೇಟಿ ಮಾಡಿ ಪರಿಶೀಲನೆ ನಡೆಸಿದ್ದಾರೆ.

ವಿಧಾನಸಭಾ ಸ್ಪೀಕರ್ ಯುಟಿ ಖಾದರ್ ದರೋಡೆ ಕುರಿತು ಪ್ರತಿಕ್ರಿಯೆ ನೀಡಿದ್ದು, ಬ್ಯಾಂಕ್ ದರೋಡೆಯ ಸ್ಥಳದಲ್ಲಿ ಜನಸಂದಣಿ ಕಡಿಮೆ ಇರುವ ಸಮಯದಲ್ಲಿ ಕೃತ್ಯ ನಡೆದಿದೆ. ಆರೋಪಿಗಳನ್ನು ಬಂಧಿಸಲು ವಿಶೇಷ ತಂಡ ರಚನೆ ಮಾಡಲು ಸೂಚನೆ ನೀಡಲಾಗಿದೆ. ಜಿಲ್ಲಾಡಳಿತದಿಂದ ಪೊಲೀಸರಿಗೆ ಸಂಪೂರ್ಣ ಸಹಕಾರವಿದೆ ಹಾಗೂ ಶೀಘ್ರದಲ್ಲಿ ಆರೋಪಿಗಳನ್ನು ಹಿಡಿಯುವ ವಿಶ್ವಾಸವಿದೆ ಎಂದು ಖಾದರ್ ತಿಳಿಸಿದ್ದಾರೆ. ಸುರಕ್ಷತೆ ಹೆಚ್ಚಿಸಲು ಮುಂದಾದ ಕ್ರಮಗಳು ಜನತೆಗೆ ಭರವಸೆ ನೀಡುತ್ತವೆ.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!

You cannot copy content of this page