back to top
24.3 C
Bengaluru
Thursday, August 14, 2025
HomeIndiaFreedom Park ನ ಗೋಡೆ ಕೆಡವಿ, ಮರಗಳನ್ನು ಕಡಿತ ಮಾಡಿದ ಆರೋಪ – BJP ಯಿಂದ...

Freedom Park ನ ಗೋಡೆ ಕೆಡವಿ, ಮರಗಳನ್ನು ಕಡಿತ ಮಾಡಿದ ಆರೋಪ – BJP ಯಿಂದ ಪೊಲೀಸರಿಗೆ ದೂರು

- Advertisement -
- Advertisement -

Bengaluru: ರಾಹುಲ್ ಗಾಂಧಿ ನೇತೃತ್ವದಲ್ಲಿ ಆಗಸ್ಟ್ 5 ರಂದು ಫ್ರೀಡಂ ಪಾರ್ಕ್‌ನಲ್ಲಿ (Freedom Park) ನಡೆಯಬೇಕಿದ್ದ ಕಾಂಗ್ರೆಸ್ ಪಕ್ಷದ ಮತದಾನ ಕುರಿತ ಪ್ರತಿಭಟನೆಯನ್ನು ಶಿಬು ಸೊರೇನ್ ನಿಧನದ ಹಿನ್ನೆಲೆಯಲ್ಲಿ ಆಗಸ್ಟ್ 8ಕ್ಕೆ ಮುಂದೂಡಲಾಗಿದೆ.

ಆದರೆ, ಈ ಸಮಾವೇಶದ ಪೂರ್ವಭಾವಿಯಾಗಿ ಫ್ರೀಡಂ ಪಾರ್ಕ್‌ನಲ್ಲಿದ್ದ ಒಂದು ಹಳೆಯ ತಡೆಗೋಡೆಯನ್ನು ಕೆಡವಲಾಗಿದೆ ಮತ್ತು ಹಲವಾರು ಮರಗಳನ್ನು ಕಡಿಯಲಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಈ ಕುರಿತು ಉಪ್ಪಾರಪೇಟೆ ಪೊಲೀಸರಿಗೆ ದೂರು ಕೂಡ ನೀಡಿದ್ದಾರೆ.

  • ಕಾಂಗ್ರೆಸ್ ಪಾರ್ಟಿ ತಮ್ಮ ರಾಜಕೀಯ ಕಾರ್ಯಕ್ರಮದ ಹೆಸರಿನಲ್ಲಿ ಸಾರ್ವಜನಿಕ ಆಸ್ತಿಯೇ ಆದ ತಡೆಗೋಡೆ ಕೆಡವಿ, ಜನರಿಗೆ ತೊಂದರೆಂಟು ಮಾಡಿದ್ದಾರೆ.
  • ಯಾವುದೇ ಸರ್ಕಾರದ ಅನುಮತಿ ಇಲ್ಲದೆ ಈ ಕೆಡವಿಕೆಯ ಕೆಲಸ ಮಾಡಿದ್ದಾರೆ.
  • ಸರ್ಕಾರದ ಅಧಿಕಾರ ದುರುಪಯೋಗವಾಗಿದೆ ಎಂದು ಆರೋಪಿಸಿದ್ದಾರೆ.
  • ಸಾರ್ವಜನಿಕ ಆಸ್ತಿಗೆ ಹಾನಿ, ಪರಿಸರ ನಾಶ ಹಾಗೂ ಸರ್ಕಾರದ ಹಣಕ್ಕೆ ನಷ್ಟ ಉಂಟುಮಾಡಲಾಗಿದೆ.

ಬಿಜೆಪಿಯ ಬೇಡಿಕೆ

  • ಈ ಕಾರ್ಯಕ್ಕೆ ಕಾರಣರಾಗಿರುವ ಆಯೋಜಕರು ಹಾಗೂ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು.
  • ಸಾರ್ವಜನಿಕರಿಗೆ ನ್ಯಾಯ ದೊರಕಿಸಬೇಕು ಎಂದು ಬಿಜೆಪಿ ಒತ್ತಾಯಿಸಿದೆ.

ಕಾಂಗ್ರೆಸ್ ಆಯೋಜಿಸುತ್ತಿರುವ ಸಮಾವೇಶಕ್ಕೆ ತಯಾರಿ ಎಂಬ ಹೆಸರಿನಲ್ಲಿ ಸಾರ್ವಜನಿಕ ಆಸ್ತಿ ಹಾನಿಯಾಗಿದ್ದು, ಈ ಕುರಿತು ಬಿಜೆಪಿ ಕಠಿಣ ಆಕ್ಷೇಪ ವ್ಯಕ್ತಪಡಿಸಿದೆ ಮತ್ತು ಸೂಕ್ತ ಕ್ರಮಕ್ಕೆ ಒತ್ತಾಯಿಸಿದೆ.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!

You cannot copy content of this page