back to top
20.5 C
Bengaluru
Tuesday, July 15, 2025
HomeIndiaNew DelhiModi ಭೇಟಿಯಾದ CM Siddaramaiah: 5,300 ಕೋಟಿ ರೂ. ಅನುದಾನಕ್ಕೆ ಮನವಿ

Modi ಭೇಟಿಯಾದ CM Siddaramaiah: 5,300 ಕೋಟಿ ರೂ. ಅನುದಾನಕ್ಕೆ ಮನವಿ

- Advertisement -
- Advertisement -

New Delhi: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು (Prime Minister Narendra Modi) ದೆಹಲಿಯಲ್ಲಿ ಭೇಟಿ ಮಾಡಿದ್ದಾರೆ. ಇದು 4 ತಿಂಗಳಲ್ಲಿ ಅವರ ಎರಡನೇ ಭೇಟಿಯಾಗಿದ್ದು, ಭದ್ರಾ ಮೇಲ್ದಂಡೆ ಯೋಜನೆ, (Bhadra Upper Bank Project) ನಬಾರ್ಡ್ (NABARD) ಅನುದಾನ ಕಡಿತ, ರಾಜ್ಯದ ತೆರಿಗೆ ಪಾಲು ಹೆಚ್ಚಳ ಸೇರಿದಂತೆ ಹಲವು ಪ್ರಮುಖ ವಿಚಾರಗಳನ್ನು ಚರ್ಚಿಸಿದರು.

ಸಿಎಂ ಸಿದ್ದರಾಮಯ್ಯ ಅವರು, ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಹಣ ಬಿಡುಗಡೆ ಮಾಡುವಂತೆ ಪ್ರಧಾನಿಗೆ ಮನವಿ ಮಾಡಿದರು. ನಬಾರ್ಡ್ ರೈತರಿಗೆ ನೀಡುವ ಕೃಷಿ ಸಾಲದಲ್ಲಿ 58% ಕಡಿತ ಮಾಡಿದ್ದು, ಇದರಿಂದ ರೈತರ ಮೇಲೆ ಭಾರಿ ಪರಿಣಾಮ ಉಂಟಾಗಿದೆ. ಅವರು ಕಳಸಾ-ಬಂಡೂರಿ, ಮೇಕೆದಾಟು ಯೋಜನೆಗಳ ಅನುಮತಿಗಾಗಿ ಸಹ ಮನವಿ ಮಾಡಿದರು.

ಮನವಿ ಪತ್ರದ ಮುಖ್ಯಾಂಶಗಳು

  • ನಬಾರ್ಡ್ ಕೃಷಿ ಸಾಲದಲ್ಲಿ 58% ಕಡಿತ: 2023-24ರಲ್ಲಿ 5,600 ಕೋಟಿ ರೂ. ಕೃಷಿ ಸಾಲವನ್ನು ಮಂಜೂರು ಮಾಡಿದ್ದರೆ, 2024-25ರಲ್ಲಿ ಅದನ್ನು 2,340 ಕೋಟಿ ರೂ.ಗೆ ಕಡಿತಗೊಳಿಸಲಾಗಿದೆ.
  • ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಅನುದಾನ: ಕೇಂದ್ರ ಬಜೆಟ್‌ನಲ್ಲಿ ಈ ಮೊತ್ತವನ್ನು ಮಂಜೂರು ಮಾಡುವ ಭರವಸೆ ನೀಡಿದ್ದು, ತಕ್ಷಣ ಹಣ ಬಿಡುಗಡೆ ಮಾಡಬೇಕೆಂದು ಮನವಿ.
  • ಕಳಸಾ-ಬಂಡೂರಿ ಮತ್ತು ಮೇಕೆದಾಟು ಯೋಜನೆಗಳು: ಯೋಜನೆಗಳಿಗೆ ಶೀಘ್ರ ಅನುಮತಿ ನೀಡುವಂತೆ ಜಲಶಕ್ತಿ ಮತ್ತು ಪರಿಸರ ಸಚಿವಾಲಯಗಳಿಗೆ ನಿರ್ದೇಶನ ನೀಡುವಂತೆ ಪ್ರಧಾನಿ ಅವರನ್ನು ಕೋರಿದರು.
  • ಬೆಂಗಳೂರು ಅಭಿವೃದ್ಧಿ: ಬೃಹತ್ ನಗರ ಸಾರಿಗೆ ಮತ್ತು ಸಾರ್ವಜನಿಕ ಯೋಜನೆಗಳಿಗೆ ಕೇಂದ್ರದಿಂದ ವಿಶೇಷ ನೆರವು ನೀಡಬೇಕೆಂದು ಪ್ರಸ್ತಾಪಿಸಿದರು.

ಸಿಎಂ ಸಿದ್ದರಾಮಯ್ಯ ಅವರ ಈ ಭೇಟಿಯ ನಂತರ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!

You cannot copy content of this page