Home Business ಗುತ್ತಿಗೆದಾರರ ಎಚ್ಚರಿಕೆ: ಬಾಕಿ ಬಿಲ್ ಪಾವತಿ ಇಲ್ಲದಿದ್ದರೆ High commandಗೆ ದೂರು

ಗುತ್ತಿಗೆದಾರರ ಎಚ್ಚರಿಕೆ: ಬಾಕಿ ಬಿಲ್ ಪಾವತಿ ಇಲ್ಲದಿದ್ದರೆ High commandಗೆ ದೂರು

Deputy Chief Minister DK Shivakumar

Bengaluru: ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ (Karnataka Congress government) ಗುತ್ತಿಗೆದಾರರು ಮತ್ತೊಮ್ಮೆ ತಲೆನೋವಾಗಬಹುದು. ಇದುವರೆಗೆ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದ ಗುತ್ತಿಗೆದಾರರು ಈಗ ಮತ್ತೆ ಬಾಕಿ ಬಿಲ್ ಪಾವತಿ ಮತ್ತು ಕಮಿಷನ್ ಸಮಸ್ಯೆ ಕುರಿತು ಧ್ವನಿ ಎತ್ತಿದ್ದಾರೆ.

ಗುತ್ತಿಗೆದಾರರು ಬಾಕಿ ಬಿಲ್ ಪಾವತಿ ಮಾಡಬೇಕು ಮತ್ತು ಕಮಿಷನ್ ಪದ್ಧತಿಯನ್ನು ಸ್ಥಗಿತಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ. ಈ ಬೇಡಿಕೆ ಈಡೇರದಿದ್ದರೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿಗೆ ದೂರು ನೀಡುವುದಾಗಿ ಎಚ್ಚರಿಸಿದ್ದಾರೆ.

ಈ ಪರಿಸ್ಥಿತಿಯನ್ನಣಿಸುವ ಸಲುವಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗುತ್ತಿಗೆದಾರರೊಂದಿಗೆ ಸಭೆ ನಡೆಸಲು ಮುಂದಾಗಿದ್ದಾರೆ. ಈ ಸಭೆ ಇಂದು ಮಧ್ಯಾಹ್ನ 3 ಗಂಟೆಗೆ ವಿಧಾನಸೌಧದಲ್ಲಿ ನಡೆಯುವ ಸಾಧ್ಯತೆ ಇದೆ.

ಗುತ್ತಿಗೆದಾರರು ಈ ಸರ್ಕಾರದಲ್ಲಿ ಕಮಿಷನ್ ಶೇ.ಗಾಣಕ ಹೆಚ್ಚಾಗಿದೆ ಎಂದು ಆರೋಪಿಸುತ್ತಿದ್ದಾರೆ. ಬಿಬಿಎಂಪಿ ಗುತ್ತಿಗೆದಾರರ ಸಂಘದ ಸದಸ್ಯ ಹೇಮಂತ್ ಕುಮಾರ್ ಈ ಹಿಂದೆ ಬಾಕಿ ಬಿಲ್ ಬಿಡುಗಡೆಗೆ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದರು. ನಂತರ ಅವರು ತಮ್ಮ ಹೇಳಿಕೆಯನ್ನು ಹಿಂತೆಗೆದುಕೊಂಡಿದ್ದರು.

ಇದೀಗ ಮತ್ತೊಮ್ಮೆ ಗುತ್ತಿಗೆದಾರರು ಸರ್ಕಾರದ ವಿರುದ್ಧ ಕಿಡಿಕಾರಲು ಸಜ್ಜಾಗಿದ್ದಾರೆ. ಡಿಕೆ ಶಿವಕುಮಾರ್ ನಡೆಸಲಿರುವ ಸಭೆಯ ಬಳಿಕ ಈ ಸಮಸ್ಯೆಗೆ ಏನಾದರೂ ಪರಿಹಾರ ಸಿಗುತ್ತದೆಯಾ ಎಂಬುದನ್ನು ಕಾದು ನೋಡಬೇಕಾಗಿದೆ.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

You cannot copy content of this page

Exit mobile version