back to top
22.7 C
Bengaluru
Wednesday, October 29, 2025
HomeKarnatakaಅಧಿಕಾರ ಹಂಚಿಕೆ ಕುರಿತು ಗೊಂದಲ: Congress ನಲ್ಲಿ ಹೊಸ ಒತ್ತಡ

ಅಧಿಕಾರ ಹಂಚಿಕೆ ಕುರಿತು ಗೊಂದಲ: Congress ನಲ್ಲಿ ಹೊಸ ಒತ್ತಡ

- Advertisement -
- Advertisement -

Bengaluru: ಕರ್ನಾಟಕ ಕಾಂಗ್ರೆಸ್‌ನಲ್ಲಿ (Congress) ಮತ್ತೆ ಅಧಿಕಾರ ಹಂಚಿಕೆಯ ಗೊಂದಲ ತಲೆದೋರಿದೆ. ಸಚಿವ ಸತೀಶ್ ಜಾರಕಿಹೊಳಿ, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆ ಕುರಿತ ಸ್ಪಷ್ಟತೆಗಾಗಿ ಹೈಕಮಾಂಡ್‌ನ್ನು ಒತ್ತಾಯಿಸಿದ್ದಾರೆ.

ಸರ್ಕಾರ ರಚನೆಯಾದ ಬಳಿಕದಿಂದಲೇ “ಯಾರು ಎಷ್ಟು ಅಧಿಕಾರ ಹೊಂದಬೇಕು” ಎಂಬ ಪ್ರಶ್ನೆ ಪಕ್ಷದೊಳಗೆ ತೀವ್ರ ಚರ್ಚೆಯಾಗುತ್ತಿದೆ. ಸತೀಶ್ ಜಾರಕಿಹೊಳಿ ಅವರ ಮಾತಿಗೆ ಗೃಹ ಸಚಿವ ಪರಮೇಶ್ವರ್ ಕೂಡ ಬೆಂಬಲ ನೀಡಿದ್ದಾರೆ.

ಕೇವಲ ಒತ್ತಡ ಸೃಷ್ಟಿಸುವ ಪ್ರಯತ್ನವಲ್ಲದೆ, ಪಕ್ಷದೊಳಗಿನ ನಾಯಕತ್ವ ಬದಲಾವಣೆಯ ಚರ್ಚೆಯನ್ನು ತಡೆಯುವ ತಂತ್ರಗಾರಿಕೆ ಕೂಡ ಹಿನ್ನಲೆಯಲ್ಲಿ ನಡೆಯುತ್ತಿದೆ ಎನ್ನಲಾಗುತ್ತಿದೆ. ಸದ್ಯ ಸಿಎಂ ಸ್ಥಾನವನ್ನು ಕಣ್ಣಿನ ಮೇಲೆ ಇಟ್ಟುಕೊಂಡಿರುವ ಡಿಕೆ ಶಿವಕುಮಾರ್ ತಮ್ಮ ಮುಂದಿನ ಹೆಜ್ಜೆಯ ಬಗ್ಗೆ ಮೌನ ವಹಿಸಿದ್ದಾರೆ.

ನವೆಂಬರ್ ತಿಂಗಳು ಹತ್ತಿರ ಬರುತ್ತಿರುವಾಗ, ಅಹಿಂದ ನಾಯಕರು ಹೈಕಮಾಂಡ್‌ಗೆ ಚೆಂಡು ಎಸೆದು — “ಅಧಿಕಾರ ಹಂಚಿಕೆಯ ಬಗ್ಗೆ ಸ್ಪಷ್ಟನೆ ನೀಡಿ” ಎಂದು ಒತ್ತಾಯಿಸುತ್ತಿದ್ದಾರೆ. ಆದರೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈ ವಿಷಯದಲ್ಲಿ ಯಾವುದೇ ಪ್ರತಿಕ್ರಿಯೆ ನೀಡದೇ ಮೌನ ವಹಿಸಿದ್ದಾರೆ.

ಪ್ರಸ್ತುತ ಪರಿಸ್ಥಿತಿಯಲ್ಲಿ ಯಾವುದೇ ದೊಡ್ಡ ಬದಲಾವಣೆಯ ಲಕ್ಷಣಗಳು ಕಾಣದಿದ್ದರೂ, ಸತೀಶ್ ಜಾರಕಿಹೊಳಿ ಅವರ ಒತ್ತಡ ರಾಜ್ಯ ರಾಜಕೀಯದಲ್ಲಿ ಹೊಸ ತಿರುವಿನ ಮುನ್ಸೂಚನೆಯಾ ಎಂಬುದನ್ನು ಕಾಲವೇ ತಿಳಿಸಬೇಕು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!

You cannot copy content of this page