Friday, September 20, 2024
HomeKarnatakaDavanagereದಾವಣಗೆರೆ ಗಣೇಶ ವಿಸರ್ಜನೆ ಕಲ್ಲು ತೂರಾಟ: 18 ಜನರಿಗೆ ನ್ಯಾಯಾಂಗ ಬಂಧನ

ದಾವಣಗೆರೆ ಗಣೇಶ ವಿಸರ್ಜನೆ ಕಲ್ಲು ತೂರಾಟ: 18 ಜನರಿಗೆ ನ್ಯಾಯಾಂಗ ಬಂಧನ

Davanagere: ಜಿಲ್ಲೆಯ ಬೇತೂರು ರಸ್ತೆಯಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ(Ganesha procession) ವೇಳೆ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ (Davanagere Stone Pelting Case) ಸಂಬಂಧಿಸಿದಂತೆ 18 ಜನರಿಗೆ ನ್ಯಾಯಾಧೀಶರಾದ ಪ್ರಶಾಂತ್ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಗಣೇಶ ಸಮಿತಿಯ 8 ಜನ ಸೇರಿ ಎರಡು ಕೋಮಿನ ಒಟ್ಟು 18 ಜನ ಆರೋಪಿಗಳನ್ನು ಪೊಲೀಸರು ಬಂಧಿಸಿ ಬಿಗಿ ಪೊಲೀಸ್ ಭದ್ರತೆಯಲ್ಲಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. ಆರೋಪಿಗಳ ವಿಚಾರಣೆ ಬಳಿಕ 18 ಜನರಿಗೆ ನ್ಯಾಯಾಧೀಶರು 14 ದಿನಗಳ ಕಾಲ ನ್ಯಾಯಾಂಗ ಬಂಧನ (Judicial Custody) ವಿಧಿಸಿದರು. ಅಶೋಕ ರೋಡ್, ಹಾಸಭಾವಿ ಸರ್ಕಲ್ ಸೇರಿದಂತೆ ಹಳೇ ದಾವಣಗೆರೆಯ ಹಲವು ಏರಿಯಾಗಳು ಉದ್ವಿಘ್ನಗೊಂಡಿವೆ. ಘಟನೆಯಲ್ಲಿ ಹಲವು ಪೊಲೀಸ್ (Karnataka Police) ಸಿಬ್ಬಂದಿಗೂ ಗಾಯಗಳಾಗಿವೆ.

ದಾವಣಗೆರೆಯಲ್ಲಿ ಬಾವುಟ ಕಟ್ಟುವ ವಿಚಾರಕ್ಕೆ ಹಿಂದೆ ಗಲಾಟೆ ನಡೆದಿತ್ತು. ಈ ವೇಳೆ ಹಿಂದೂ ಮುಖಂಡ ಸತೀಶ್ ಪೂಜಾರಿ ಪ್ರಚೋದನಕಾರಿ ಭಾಷಣ ಮಾಡಿದ್ದರು. ಗಾಂಧಿನಗರ ನಮ್ಮದು, ಗಾಂಧಿನಗರ ಜನರ ಮೈಮುಟ್ಟಿದ್ರೆ ಸುಮ್ಮನೆ ಇರುವುದಿಲ್ಲ. ಆಜಾದ್ ನಗರಕ್ಕೆ ನುಗ್ತೀವಿ ಅಂತ ಮಾಡಿದ್ದ ಭಾಷಣವೇ ಗಲಭೆಗೆ ಕಾರಣ ಅಂತ ಹೇಳಲಾಗುತ್ತಿದೆ.

For Daily Updates WhatsApp ‘HI’ to 7406303366

RELATED ARTICLES

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!
- Advertisment -

Most Popular

Karnataka

India

You cannot copy content of this page