
Bengaluru: ಕರ್ನಾಟಕದ ಹೈಕೋರ್ಟ್ (Karnataka High Court) ಸೇರಿದಂತೆ ಧಾರವಾಡ, ಕಲಬುರಗಿ ಪೀಠಗಳು ಹಾಗೂ ಎಲ್ಲ ಜಿಲ್ಲೆಗಳಲ್ಲಿ ಇರುವ ನ್ಯಾಯಾಲಯಗಳಲ್ಲಿ ಸಂವಿಧಾನದ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ (Dr. B.R. Ambedkar) ಅವರ ಭಾವಚಿತ್ರ (Ambedkar’s portrait) ಅಳವಡಿಸಲು ತೀರ್ಮಾನಿಸಲಾಗಿದೆ.
ಇತ್ತೀಚೆಗೆ ನಡೆದ ಹೈಕೋರ್ಟ್ ಫುಲ್ ಕೋರ್ಟ್ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ನ್ಯಾಯಾಲಯಗಳ ಸಭಾಂಗಣಗಳು ಮತ್ತು ಪ್ರಮುಖ ಸ್ಥಳಗಳಲ್ಲಿ ಅಂಬೇಡ್ಕರ್ ಭಾವಚಿತ್ರ ಹಾಕಲಾಗುವುದು ಎಂದು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಕೆ.ಎಸ್. ಭರತ್ ಕುಮಾರ್ ತಿಳಿಸಿದ್ದಾರೆ.