Home Karnataka Dakshina Kannada ಪ್ರಧಾನಿ ಮೋದಿ ದೀರ್ಘಾಯಸ್ಸು ಕೋರಿ ಮಹಾಮೃತ್ಯುಂಜಯ ಹೋಮ

ಪ್ರಧಾನಿ ಮೋದಿ ದೀರ್ಘಾಯಸ್ಸು ಕೋರಿ ಮಹಾಮೃತ್ಯುಂಜಯ ಹೋಮ

Dharmasthala Priests Perform Mrityunjaya Homam for Prime Minister Narendra Modi

Dharmasthala, Dakshina Kannada : ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ (Sri Kshethra Dharmasthala Manjunatha Swamy Temple) ಪ್ರಧಾನ ಮಂತ್ರಿ ನರೇಂದ್ರ ಮೋದಿ (Prime Minister Narendra Modi) ಅವರ ದೀರ್ಘಾಯಸ್ಸು ಮತ್ತು ಆರೋಗ್ಯ ವೃದ್ಧಿಗಾಗಿ ಮಹಾಮೃತ್ಯುಂಜಯ ಹೋಮವನ್ನು (Mrityunjaya Homam) ನೆರವೇರಿಸಲಾಯಿತು.

ಬೆಳ್ತಂಗಡಿ ತಾಲ್ಲೂಕಿನ ಜನತೆಯ ಪರವಾಗಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ 108 ಪುರೋಹಿತರಿಂದ ಮಹಾ ಮೃತ್ಯುಂಜಯ ಹೋಮವನ್ನು ನಡೆಸಲಾಯಿತು.

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರ ಸಮ್ಮುಖದಲ್ಲಿ ಬೆಳಗ್ಗೆ 7 ಗಂಟೆಯಿಂದ ಚತುರ್ವೇದ ಪಾರಾಯಣ, ಗೋಪೂಜೆ, ಮಹಾಗಣಪತಿ ಹೋಮದ ಬಳಿಕ ಮಹಾಮೃತ್ಯುಂಜಯ ಹೋಮ ನೆರವೇರಿಸಲಾಯಿತು.

ಸಚಿವ ಕೆ.ಎಸ್.ಈಶ್ವರಪ್ಪ, ಸಿ.ಸಿ.ಪಾಟೀಲ್, ಶಶಿಕಲಾ ಜೊಲ್ಲೆ, ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ, ವಿವಿಧ ಜಿಲ್ಲೆಗಳ ಶಾಸಕರು ಹಾಗೂ ಬಿಜೆಪಿ ಪ್ರಮುಖರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

NO COMMENTS

LEAVE A REPLY

Please enter your comment!
Please enter your name here

You cannot copy content of this page

Exit mobile version