
Gauribidanur : ಗೌರಿಬಿದನೂರು ಬಳಿಯಲ್ಲಿರುವ ಸಣ್ಣ ನೀರಾವರಿ ಇಲಾಖೆಯ (Minor Irrigation Department ) ವ್ಯಾಪ್ತಿಯ ಕಲ್ಲೂಡಿ ಕೆರೆಗೆ ಶಾಸಕ ಕೆ.ಎಚ್. ಪುಟ್ಟಸ್ವಾಮಿ ಗೌಡ (KH Puttaswamy Gowda) ಬುಧವಾರ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಕೆರೆಯ ಸಮಗ್ರ ಅಭಿವೃದ್ಧಿ ಕುರಿತು (Kalludi Lake development Meeting) ಚರ್ಚಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು 75 ಹೆಕ್ಟೇರ್ ವಿಸ್ತೀರ್ಣ ಹಾಗೂ 5.5 ಕಿ.ಮೀ ಸುತ್ತಳತೆ ಹೊಂದಿರುವ ಈ ಕೆರೆಯು 55 ಎಂಸಿಎಫ್ಟಿ ನೀರನ್ನು ಶೇಖರಿಸಬಹುದಾದ ಸಾಮರ್ಥ್ಯ ಹೊಂದಿದೆ. ಈ ಕೆರೆಯ ಅಭಿವೃದ್ಧಿಗೆ ಈಗಾಗಲೇ ₹3 ಕೋಟಿ ಅನುದಾನವನ್ನು ಸರ್ಕಾರ ನೀಡಿದೆ ಎಂದು ತಿಳಿಸಿ ಈ ಅನುದಾನದಲ್ಲಿ ಕೆರೆ ದುರಸ್ತಿಯ ಜೊತೆಗೆ ನಾಗರಿಕರು ವಾಯುವಿಹಾರಕ್ಕೆ ಬಳಸಬಹುದಾದ ವಾಕಿಂಗ್ ಟ್ರ್ಯಾಕ್, ಕುಳಿತುಕೊಳ್ಳಲು ಆಸನಗಳು, ಕುಡಿಯುವ ನೀರಿನ ಸೌಲಭ್ಯಗಳ ವ್ಯವಸ್ಥೆ ಮಾಡಲು ಯೋಜನೆ ರೂಪಿಸಲು ಸಣ್ಣ ನೀರಾವರಿ ವಿಭಾಗದ ಎಂಜಿನಿಯರ್ ಎಂ.ವಿ. ಶ್ರೀನಿವಾಸ್ ಅವರಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಎಂಜಿನಿಯರ್ ಎಂ.ವಿ. ಶ್ರೀನಿವಾಸ್, ನಗರಸಭೆ ಅಧ್ಯಕ್ಷ ಲಕ್ಷ್ಮೀನಾರಾಯಣಪ್ಪ, ಉಪಾಧ್ಯಕ್ಷ ಫರೀದ್, ಸದಸ್ಯರು ಖಲೀಂಉಲ್ಲಾ, ಶ್ರೀಕಾಂತ್, ಅಭಿಯಂತರೆ ಧಾನಿಯಾ ಫೈರೋಜ್ ಹಾಗೂ ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.
For Daily Updates WhatsApp ‘HI’ to 7406303366
The post ಕೆರೆ ಅಭಿವೃದ್ಧಿಗೆ ಕ್ರಮ: ಶಾಸಕ appeared first on Chikkaballapur | Chikballapur | Chikkaballapura Latest Breaking New Stories | ಚಿಕ್ಕಬಳ್ಳಾಪುರ ಸುದ್ದಿ.