back to top
27.1 C
Bengaluru
Saturday, October 11, 2025
HomeIndiaUttar Pradeshಜ್ಞಾನವಾಪಿ ಮಸೀದಿ ಸಮೀಕ್ಷೆ ಜುಲೈ 26 ರ ವರೆಗೆ ಸ್ಥಗಿತ - ಸುಪ್ರೀಂ ಕೋರ್ಟ್

ಜ್ಞಾನವಾಪಿ ಮಸೀದಿ ಸಮೀಕ್ಷೆ ಜುಲೈ 26 ರ ವರೆಗೆ ಸ್ಥಗಿತ – ಸುಪ್ರೀಂ ಕೋರ್ಟ್

- Advertisement -
- Advertisement -

ಜುಲೈ 26 ರ ಸಂಜೆ 5 ಗಂಟೆಯವರೆಗೆ ಯಾವುದೇ ಪುರಾತತ್ವ ಸರ್ವೇಕ್ಷಣಾ ಸಂಸ್ಥೆಯು (ASI) ಜ್ಞಾನವಾಪಿ ಮಸೀದಿ ಸಂಕೀರ್ಣದ ಸಮೀಕ್ಷೆಯನ್ನು (Gyanvapi Mosque Survey) ನಡೆಸದಂತೆ ಸೋಮವಾರ ಸುಪ್ರೀಂ ಕೋರ್ಟ್ ಆದೇಶಿಸಿದೆ. ಮಸೀದಿ ಸಮಿತಿಯನ್ನು ಪ್ರತಿನಿಧಿಸುವ ಹಿರಿಯ ವಕೀಲ ಹುಝೆಫಾ ಅಹ್ಮದಿ ಅವರು ನ್ಯಾಯಾಲಯದ ಮುಂದೆ ಸಲ್ಲಿಸಿದ ಅರ್ಜಿಯನ್ನು ಪರಿಶೀಲಿಸಿದ ನಂತರ ಸುಪ್ರೀಂ ಕೋರ್ಟ್ ಈ ನಿರ್ಧಾರವನ್ನು ತೆಗೆದುಕೊಂಡಿದೆ.

ಉತ್ತರ ಪ್ರದೇಶದ ವಾರಣಾಸಿಯಲ್ಲಿರುವ ಜ್ಞಾನವಾಪಿ ಕ್ಯಾಂಪಸ್‌ನ ಎಎಸ್‌ಐ ಸಮೀಕ್ಷೆ ಇಂದು ಆರಂಭವಾಗಬೇಕಿದ್ದು, ನಿಗದಿತ ದಿನಾಂಕ ಮತ್ತು ಸಮಯದವರೆಗೆ ತಡೆಹಿಡಿಯಲು ತಿಳಿಸಲಾಗಿದೆ. ಎಎಸ್‌ಐ ತಂಡವು ಬೆಳಿಗ್ಗೆ 7 ಗಂಟೆಗೆ ಸಮೀಕ್ಷೆಯನ್ನು ಪ್ರಾರಂಭಿಸಬೇಕಾಗಿತ್ತು ಆದರೆ ಸುಪ್ರೀಂ ಕೋರ್ಟ್ ಯಾವುದೇ ಉತ್ಖನನವನ್ನು ನಡೆಸದಂತೆ ಸೂಚನೆ ನೀಡಿದೆ.

ಎಎಸ್‌ಐ ಸಮೀಕ್ಷೆಯ ಉದ್ದೇಶವು ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿಯನ್ನು ದೇವಾಲಯದ ಮೇಲೆ ನಿರ್ಮಿಸಲಾಗಿದೆಯೇ ಎಂದು ನಿರ್ಧರಿಸುವುದಾಗಿದ್ದು, ಸಮೀಕ್ಷಾ ವರದಿಯನ್ನು ಆಗಸ್ಟ್ 4ರೊಳಗೆ ವಾರಣಾಸಿ ಜಿಲ್ಲಾ ನ್ಯಾಯಾಲಯಕ್ಕೆ ಸಲ್ಲಿಸುವ ನಿರೀಕ್ಷೆಯಿದೆ.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!

You cannot copy content of this page