New Delhi: ಲೋಕಸಭೆಯಲ್ಲಿ (Lok Sabha) ವಲಸೆ ಮತ್ತು ವಿದೇಶಿಯರ ಮಸೂದೆ (Immigration Bill) ಅಂಗೀಕರಿಸಲಾಗಿದೆ. ಈ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Union Home Minister Amit Shah) ಮಾತನಾಡಿ, ಭಾರತದಲ್ಲಿ ಅಲ್ಪಸಂಖ್ಯಾತರು ಅತ್ಯಂತ ಸುರಕ್ಷಿತರಾಗಿದ್ದಾರೆ ಎಂದು ತಿಳಿಸಿದ್ದಾರೆ. ನಿರಾಶ್ರಿತರ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ ಎಂದು ಅವರು ಪುನರುಚ್ಚರಿಸಿದರು.
ವಿದೇಶಿಗರಿಗೆ ಸ್ವಾಗತ, ಆದರೆ ಅಪಾಯಕರರಿಗೆ ಪ್ರವೇಶವಿಲ್ಲ. ಅವರು ಶಿಕ್ಷಣ, ಆರೋಗ್ಯ ಮತ್ತು ವ್ಯವಹಾರಕ್ಕಾಗಿ ಭಾರತಕ್ಕೆ ಬರುವವರನ್ನು ಸ್ವಾಗತಿಸಲಾಗುವುದು ಎಂದರೆ, ಭದ್ರತೆಗೆ ಧಕ್ಕೆ ತರುವವರನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಸ್ಪಷ್ಟಪಡಿಸಿದರು. ಭಾರತ ಧರ್ಮಶಾಲೆಯಲ್ಲ ಎಂದು ಹೇಳಿದ ಅವರು, ದೇಶದ ಭದ್ರತೆಗೆ ತೊಂದರೆ ಉಂಟುಮಾಡುವವರನ್ನು ಪ್ರವೇಶಿಸಲು ಅನುಮತಿ ನೀಡುವುದಿಲ್ಲ ಎಂದು ಒತ್ತಿಹೇಳಿದರು.
ಅಮಿತ್ ಶಾ ಪ್ರಕಾರ, ವಲಸೆ ಮಸೂದೆ ದೇಶದ ಭದ್ರತೆಯನ್ನು ಬಲಪಡಿಸುವ ಜೊತೆಗೆ ಆರ್ಥಿಕತೆ, ವ್ಯವಹಾರ, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳ ಅಭಿವೃದ್ಧಿಗೆ ಸಹಾಯ ಮಾಡಲಿದೆ. ಭಾರತಕ್ಕೆ ಬರುವ ಪ್ರತಿಯೊಬ್ಬ ವಿದೇಶಿಯರ ಮಾಹಿತಿ ಸರ್ಕಾರದ ದಾಖಲೆಯಲ್ಲಿರಲಿದೆ ಎಂದು ಭರವಸೆ ನೀಡಿದರು.
ಮ್ಯಾನ್ಮಾರ್ನ ರೋಹಿಂಗ್ಯಾಗಳು ಮತ್ತು ಬಾಂಗ್ಲಾದೇಶದಿಂದ ಆಗುತ್ತಿರುವ ಅಕ್ರಮ ನುಸುಳುವಿಕೆ ಕುರಿತು ಮಾತನಾಡಿದ ಅಮಿತ್ ಶಾ, ಭಾರತದಲ್ಲಿ ಆಶ್ರಯ ಪಡೆದು ಲಾಭ ಪಡೆಯಲು ಬಯಸುವವರ ಸಂಖ್ಯೆ ಹೆಚ್ಚಾಗಿದೆ, ಇದರಿಂದ ದೇಶ ಅಸುರಕ್ಷಿತವಾಗುತ್ತಿದೆ ಎಂದರು. ಒಳನುಸುಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಈ ಮಸೂದೆ 2047ರ ವೇಳೆಗೆ ಭಾರತವನ್ನು ಅಭಿವೃದ್ಧಿಶೀಲ ರಾಷ್ಟ್ರವನ್ನಾಗಿ ರೂಪಿಸಲು ಸಹಾಯ ಮಾಡಲಿದೆ ಎಂದು ಅಮಿತ್ ಶಾ ಹೇಳಿದರು. “ನಮ್ಮ ದೇಶಕ್ಕೆ ಬರುವ ಪ್ರತಿಯೊಬ್ಬರ ಬಗ್ಗೆ ನವೀಕೃತ ಮಾಹಿತಿಯನ್ನು ನಾವು ಹೊಂದಿದ್ದೇವೆ” ಎಂದು ಭರವಸೆ ನೀಡಿದರು.