![](https://kannadatopnews.com/wp-content/uploads/2024/05/23MayCBP02.jpg)
Chikkaballapur : ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿ, ಜಿಲ್ಲಾ ಪಂಚಾಯಿತಿ, ನಗರಸಭೆ, ಜಿಲ್ಲಾ ವಕೀಲರ ಸಂಘ, ಟೈಟಾನ್ ಕಂಪನಿ, ಶಾಂತಿನಿಕೇತನ್ ಪದವಿ ಪೂರ್ವ ಕಾಲೇಜು, ಇನ್ನಿತರ ಇಲಾಖೆಗಳ ಸಹಯೋಗದೊಂದಿಗೆ ವಿಶ್ವ ಪರಿಸರ ದಿನ ಅಂಗವಾಗಿ ಚಿಕ್ಕಬಳ್ಳಾಪುರ ನಗರದ ಬಿ.ಬಿ. ರಸ್ತೆಯಲ್ಲಿರುವ ಕಲ್ಯಾಣಿಯನ್ನು ಬುಧವಾರ ಸ್ವಚ್ಛಗೊಳಿಸಲಾಯಿತು (Kalyani Cleaning)
ಈ ಸಂಧರ್ಭದಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮೊಹಮ್ಮದ್ ರೋಷನ್ ಷಾ ಅವರು ಪರಿಸರ ರಕ್ಷಣೆಯ ಕುರಿತ ಪ್ರತಿಜ್ಞಾವಿಧಿ ಬೋಧಿಸಿ ಪರಿಸರದ ಬಗ್ಗೆ ಪ್ರತಿಯೊಬ್ಬರಲ್ಲೂ ಕಾಳಜಿ ಇರಬೇಕು. ಗಿಡ ಮರ ಬೆಳೆಸಿ ಪೋಷಿಸಬೇಕು. ಮುಂದಿನ ಭವಿಷ್ಯದ ಹಿತದೃಷ್ಟಿಯಿಂದ ಪರಿಸರ ರಕ್ಷಣೆ ಮಾಡುವ ಹೊಣೆಗಾರಿಕೆ ಪ್ರತಿಯೊಬ್ಬರಲ್ಲೂ ಇರಬೇಕು” ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಆರ್. ಶ್ರೀನಿವಾಸ್, ಜಿಲ್ಲಾ ಪರಿಸರ ಅಧಿಕಾರಿ ಟಿ.ಎಂ.ಸಿದ್ದೇಶ್ವರ ಬಾಬು, ನಗರಸಭೆ ಪೌರಾಯುಕ್ತ ಎ.ಎಸ್. ಮಂಜುನಾಥ, ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.
For Daily Updates WhatsApp ‘HI’ to 7406303366
The post ಕಲ್ಯಾಣಿಯನ್ನು ಸ್ವಚ್ಛಗೊಳಿಸಿದ ವಕೀಲರು ಮತ್ತು ಅಧಿಕಾರಿಗಳು appeared first on Chikkaballapur | Chikballapur | Chikkaballapura | ಚಿಕ್ಕಬಳ್ಳಾಪುರ.