back to top
20.2 C
Bengaluru
Saturday, July 19, 2025
HomeEntertainmentKamal Haasan ಹೇಳಿಕೆ ವಿವಾದ: “ತಪ್ಪು ಮಾಡಿಲ್ಲ, ಕ್ಷಮೆ ಕೇಳಲ್ಲ” ಎಂಬ ಸ್ಪಷ್ಟ ನಿಲುವು

Kamal Haasan ಹೇಳಿಕೆ ವಿವಾದ: “ತಪ್ಪು ಮಾಡಿಲ್ಲ, ಕ್ಷಮೆ ಕೇಳಲ್ಲ” ಎಂಬ ಸ್ಪಷ್ಟ ನಿಲುವು

- Advertisement -
- Advertisement -

ನಟ ಕಮಲ್ ಹಾಸನ್ (Kamal Haasan) ಅವರು ಕನ್ನಡ ಭಾಷೆಯ ಬಗ್ಗೆ ನೀಡಿದ ಹೇಳಿಕೆ ರಾಜ್ಯಾದ್ಯಂತ ಭಾರಿ ವಿರೋಧಕ್ಕೆ ತುತ್ತಾಗಿದೆ. ಬೆಂಗಳೂರು ಸೇರಿದಂತೆ ಹಲವೆಡೆ ಅವರ ವಿರುದ್ಧ ಪ್ರತಿಭಟನೆಗಳು ನಡೆದಿವೆ. ಫಿಲಂ ಚೇಂಬರ್ ಮತ್ತು ಹಲವು ಕನ್ನಡ ಪರ ಸಂಘಟನೆಗಳು, “ಕ್ಷಮೆ ಕೇಳದಿದ್ದರೆ ‘ಥಗ್ ಲೈಫ್’ ಸಿನಿಮಾವನ್ನು ಬಿಡುಗಡೆ ಮಾಡಲಿಲ್ಲ” ಎಂಬಂತೆ ಎಚ್ಚರಿಕೆ ನೀಡಿದ್ದಾರೆ.

ಮೇ 30ರಂದು ಚೆನ್ನೈನಲ್ಲಿ ಮಾತನಾಡಿದ ಕಮಲ್ ಹಾಸನ್, “ನಾನು ತಪ್ಪು ಮಾಡಿಲ್ಲ, ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ. ನಾನು ಯಾವುದೇ ಬೆದರಿಕೆಗೆ ಹೆದರುವುದಿಲ್ಲ. ನಾನು ಕಾನೂನು ಮತ್ತು ನ್ಯಾಯ ವ್ಯವಸ್ಥೆಯ ಮೇಲೆ ನಂಬಿಕೆ ಇಟ್ಟಿದ್ದೇನೆ” ಎಂದು ಸ್ಪಷ್ಟಪಡಿಸಿದರು.

‘ಥಗ್ ಲೈಫ್’ ಸಿನಿಮಾದ ಕರ್ನಾಟಕ ಹಕ್ಕುಗಳನ್ನು ಖರೀದಿಸಿರುವ ವೆಂಕಟೇಶ್ ಅವರೊಂದಿಗೆ ಚರ್ಚೆ ನಡೆಸಿದ ಫಿಲಂ ಚೇಂಬರ್, ಕಮಲ್ ಹಾಸನ್ ಅವರಿಂದ ಕ್ಷಮೆ ಕೇಳಿಸುವ ಹೊಣೆ ಹೊತ್ತಿದ್ದಾರೆ. ಆದರೆ ಕಮಲ್, 24 ಗಂಟೆಯೊಳಗೆ ಸ್ಪಷ್ಟನೆ ನೀಡಿ, ಕ್ಷಮೆ ಕೇಳುವುದಿಲ್ಲ ಎಂದಿದ್ದಾರೆ.

ಒಂದು ಕಾರ್ಯಕ್ರಮದಲ್ಲಿ ಮಾತನಾಡಿದ ಕಮಲ್ ಹಾಸನ್, “ತಮಿಳಿನಿಂದಲೇ ಕನ್ನಡ ಭಾಷೆ ಉದ್ಭವವಾಗಿದೆ” ಎಂದು ಹೇಳಿದ್ದರು. ಈ ಹೇಳಿಕೆ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಯಿತು. ಹಿರಿಯ ನಟರು ಮತ್ತು ನಿರ್ದೇಶಕರು ಸೇರಿದಂತೆ ಹಲವರು ಈ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಕೇರಳದಲ್ಲಿ ಮಾತನಾಡಿದಾಗಲೂ, “ನಾನು ಪ್ರೀತಿಯಿಂದ ಆ ಮಾತು ಆಡಿದ್ದೆ, ಪ್ರೀತಿಯಿಂದ ಆಡಿದ ಮಾತಿಗೆ ಕ್ಷಮೆ ಕೇಳುವುದು ಸಾದ್ಯವಿಲ್ಲ, ಸ್ಪಷ್ಟನೆ ಮಾತ್ರ ನೀಡಬಹುದು” ಎಂದು ಹೇಳಿದ್ದಾರೆ.

ಕಮಲ್ ಹಾಸನ್ ತಮ್ಮ ನಿಲುವಿನಲ್ಲಿ ಅಚ್ಚಳಿಯದೇ ಇದ್ದಿದ್ದಾರೆ. “ತಪ್ಪು ಮಾಡಿಲ್ಲ, ಕ್ಷಮೆ ಕೇಳಲ್ಲ, ಬೆದರಿಕೆಗೆ ಹೆದರಲ್ಲ” ಎಂಬುದೇ ಅವರ ಸ್ಪಷ್ಟ ಜವಾಬ್ದಾಗಿದೆ.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!

You cannot copy content of this page