
ಕರ್ನಾಟಕದ ಕೈಗಾರಿಕಾ ನೀತಿ 2025-30 ಎಲ್ಲರನ್ನು ಒಳಗೊಂಡ ಪ್ರಗತಿಯನ್ನು ಗುರಿಯಾಗಿ ತೆಗೆದುಕೊಂಡಿದೆ. ಈ ನೀತಿಯ ಮೂಲಕ ರಾಜ್ಯದಲ್ಲಿ 20 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ಗುರಿ ಹೊಂದಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DCM D.K. Shivakumar) ಹೇಳಿದರು.
“ಭೂ ಸ್ವಾಧೀನ ಪ್ರಕ್ರಿಯೆ, ಮೂಲಸೌಕರ್ಯವನ್ನು ಒದಗಿಸಲು ವ್ಯವಸ್ಥೆ ರೂಪಿಸಲಾಗಿದೆ. ನಾವು ಕೊಟ್ಟ ಮಾತಿಗೆ ಬದ್ಧರಾಗಿದ್ದೇವೆ” ಎಂದು ಅವರು ಹೇಳಿದರು. ಪ್ರಗತಿಪರ ಆಲೋಚನೆಗಳಿಗೆ ಬದ್ಧವಾಗಿರುವ ರಾಜ್ಯ ಸರ್ಕಾರ, ಉತ್ತಮ ಮೌಲ್ಯದ ಉದ್ಯೋಗಗಳನ್ನು ಸೃಷ್ಟಿ ಮಾಡಿ, ತಂತ್ರಜ್ಞಾನ ಆಧಾರಿತ ಸಂಸ್ಥೆಗಳನ್ನು ರೂಪಿಸುವುದಾಗಿ ತಿಳಿಸಿದ್ದಾರೆ.
“ನಾವು ಈಗಾಗಲೇ ಬಂಡವಾಳ ಹೂಡಿಕೆಯಲ್ಲಿ ಅನೇಕ ಆಕರ್ಷಕ ಅವಕಾಶಗಳನ್ನು ನೀಡಿದ್ದೇವೆ, ಇದು ನಿರುದ್ಯೋಗ ಸಮಸ್ಯೆ ಹಾಗೂ ಪರಿಸರ ಮಾಲಿನ್ಯ ನಿವಾರಣೆಗೆ ಸಹಾಯ ಮಾಡುವುದಾಗಿ” ಎಂದರು. ಕೈಗಾರಿಕೆಗೆ ಸಂಬಂಧಿಸಿದ ಸುಸ್ಥಿರ ಅಭಿವೃದ್ಧಿಯನ್ನು ಪ್ರೋತ್ಸಾಹಿಸಲು ಮತ್ತು ರಾಜ್ಯವನ್ನು ಕೈಗಾರಿಕಾ ಪ್ರಗತಿ ಮೂಲಕ ಸುಸ್ಥಿರವಾಗಿ ರೂಪಿಸುವ ಗುರಿ ಹೊಂದಿದ್ದಾರೆ.
“ನಾವು 1 ಲಕ್ಷ ಕೋಟಿಯಷ್ಟು ಹಣವನ್ನು ಸಂಚಾರ ಸಮಸ್ಯೆ ಪರಿಹರಿಸಲು ವೆಚ್ಚಮಾಡಲು ಮುಂದಾಗಿದ್ದೇವೆ. ಬೆಂಗಳೂರು ಬಿಸಿನೆಸ್ ಕಾರಿಡಾರ್ ಯಶಸ್ಸು ಸಾಧಿಸಲಿದೆ” ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
“ಕೇಂದ್ರ ಸಚಿವ ಪಿಯೂಷ್ ಗೋಯೆಲ್ ಅವರ ಸಹಕಾರದಿಂದ, ರೈತರ ಭೂಮಿಯಲ್ಲಿ 15 ಸಾವಿರ ಎಕರೆಯಲ್ಲಿ ಸೋಲಾರ್ ಪಾರ್ಕ್ ನಿರ್ಮಾಣವಾಗಿದೆ, ಇದರಿಂದ ರೈತರು ಪ್ರತಿ ವರ್ಷ ಬಾಡಿಗೆ ರೂಪದಲ್ಲಿ ಹಣ ಪಡೆಯುತ್ತಿದ್ದಾರೆ” ಎಂದರು.
“ಭದ್ರತಾ ಅಭಿವೃದ್ಧಿ, ನಿರ್ವಹಣಾ ಸುಧಾರಣೆ, ಮತ್ತು ಯೋಜನೆಗಳ ಯಶಸ್ಸಿನಿಂದ ಮುಂದಿನ ದಿನಗಳಲ್ಲಿ ಹೆಚ್ಚು ಸಹಕಾರ ದೊರಕಬೇಕೆಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.”