
Bengaluru: ಹೈಕೋರ್ಟ್ನ (Karnataka High Court) ಲೈವ್ ಸ್ಟ್ರೀಮ್ ವಿಡಿಯೋಗಳನ್ನು (live stream videos) ಹಣ ಮಾಡುವ ಉದ್ದೇಶದಿಂದ ಮನಸೋ ಇಚ್ಛೆ ಎಡಿಟ್ ಮಾಡಿ ಪ್ರಸಾರ ಮಾಡುತ್ತಿರುವುದಕ್ಕೆ ಆಕ್ಷೇಪಿಸಿ ಬೆಂಗಳೂರು ವಕೀಲರ ಸಂಘ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡರ್ (Hemant Chandangoudar) ಏಕಸದಸ್ಯ ಪೀಠ ನಡೆಸಿತು.
ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ಪ್ರತಿವಾದಿಗಳಾಗಿರುವ ಕಹಳೆ ನ್ಯೂಸ್, ಫ್ಯಾನ್ಸ್ ಟ್ರೋಲ್, ಪ್ರತಿಧ್ವನಿ, ಅವನಿಯಾನ ಮತ್ತು ರವೀಂದ್ರ ಜೋಶಿ ಕ್ರಿಯೇಷನ್ಸ್ ತಮ್ಮ ವೇದಿಕೆಯಲ್ಲಿ ಬಳಸಿರುವ ಹೈಕೋರ್ಟ್ ಲೈವ್ಸ್ಟ್ರೀಮ್ ವಿಡಿಯೊಗಳನ್ನು ತಕ್ಷಣ ತೆಗೆದು ಹಾಕಬೇಕು. ಈ ವೇದಿಕೆಗಳಲ್ಲಿನ ಲೈವ್ಸ್ಟ್ರೀಮ್ ವಿಡಿಯೊಗಳನ್ನು ಯೂಟ್ಯೂಬ್, (YouTube) ಫೇಸ್ಬುಕ್, (Facebook) ಎಕ್ಸ್ ಎಕ್ಸ್ ಕಾರ್ಪ್ ಗಳು ತಕ್ಷಣ ಡಿಲೀಟ್ (Delete) ಮಾಡಬೇಕು ಎಂದು ನ್ಯಾಯಾಲಯ ನಿರ್ದೇಶಿಸಿದೆ.
ಅಲ್ಲದೇ, ಕೇಂದ್ರ ಸರ್ಕಾರದ ಮಾಹಿತಿ ಮತ್ತು ಪ್ರಸಾರ ಇಲಾಖೆ, ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆ, ಕರ್ನಾಟಕ ಹೈಕೋರ್ಟ್ನ (Karnataka High Court) ಹೈಕೋರ್ಟ್ನ ರಿಜಿಸ್ಟ್ರಾರ್ ಜನರಲ್, ರಾಜ್ಯ ಸರ್ಕಾರ, ರಾಜ್ಯ ಪೊಲೀಸ್ ಮಹಾನಿರ್ದೇಶಕರು, ಯೂಟ್ಯೂಬ್, ( YouTube) ಫೇಸ್ಬುಕ್, (Facebook) ಎಕ್ಸ್ ಕಾರ್ಪ್, ಕಹಳೆ ನ್ಯೂಸ್, ಫ್ಯಾನ್ಸ್ ಟ್ರೋಲ್, ಪ್ರತಿಧ್ವನಿ, ಅವನಿಯಾನ ಮತ್ತು ರವೀಂದ್ರ ಜೋಶಿ ಕ್ರಿಯೇಷನ್ಸ್ಗಳಿಗೆ ನ್ಯಾಯಾಲಯ ನೋಟಿಸ್ ಜಾರಿ ಮಾಡಿದೆ.