back to top
19.4 C
Bengaluru
Saturday, July 19, 2025
HomeKarnatakaTumakuruಸಿದ್ದಲಿಂಗೇಶ್ವರರ ಮಹಾರಥೋತ್ಸವ

ಸಿದ್ದಲಿಂಗೇಶ್ವರರ ಮಹಾರಥೋತ್ಸವ

- Advertisement -
- Advertisement -

Kunigal, Tumkur (Tumakuru) : ಬುಧವಾರ ಕುಣಿಗಲ್ ನ ಐತಿಹಾಸಿಕ ಪ್ರಸಿದ್ಧ ಸಿದ್ದಲಿಂಗೇಶ್ವರರ ತಪೋ ಕ್ಷೇತ್ರ ಕಗ್ಗರೆಯಲ್ಲಿ ಸಿದ್ದಲಿಂಗೇಶ್ವರರ ಮಹಾರಥೋತ್ಸವ (Siddalingeshwara Maha Rathotsava) ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.

ರಥೋತ್ಸವದ ಅಂಗವಾಗಿ ಸ್ವಾಮಿಗೆ ರುದ್ರಾಭೀಷೇಕ, ಸಹಸ್ರ ಬಿಲ್ವಾರ್ಚನೆ, ಆರತಿ ಪೂಜೆ ನಂತರ ಯಡೆಯೂರಿನ ಬಾಳೆಹೊನ್ನೂರು ಶಾಖಾ ಮಠದ ರೇಣುಕಾಶಿವಾಚಾರ್ಯ ಸ್ವಾಮಿ, ಅಂಕನಹಳ್ಳಿ ಮಠದ ಸದಾಶಿವ ಶಿವಾಚಾರ್ಯ ಸ್ವಾಮಿ, ಹುಲಿಯೂರುದುರ್ಗ ಸಿದ್ದಗಂಗಾ ಮಠದ ಸಿದ್ದಲಿಂಗಸ್ವಾಮಿ, ಹಂಗರಹಳ್ಳಿಮಠದ ಬಾಲಮಂಜುನಾಥಸ್ವಾಮಿ ನೇತೃತ್ವದಲ್ಲಿ ವಿಶೇಷ ಪೂಜೆಯ ನಂತರ 12 ಗಂಟೆಗೆ ಮಹಾರಥೋತ್ಸವ ಪ್ರಾರಂಭವಾದ ನಂತರ ರಾಜ್ಯದ ವಿವಿಧೆಡೆಗಳಿಂದ ಬಂದಿದ್ದ ಭಕ್ತರು ದವನ, ಬಾಳೆಹಣ್ಣು ತೂರಿ ಸಂಭ್ರಮಿಸಿದರು.

ಮಾಜಿ ಸಂಸದ ಎಸ್.ಪಿ.ಮುದ್ದುಹನುಮೇ ಗೌಡ, ಬಿಜೆಪಿ ಮುಖಂಡ ರಾಜೇಶ್ ಗೌಡ, ದೇವಾಲಯದ ವ್ಯವಸ್ಥಾಪಕ ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!

You cannot copy content of this page