Hubballi: ಮಂಗಳೂರುನಲ್ಲಿ ನಡೆದ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸದಿರುವ ರಾಜ್ಯ ಸರ್ಕಾರದ ನಡೆ ವಿರುದ್ಧ ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಜಗದೀಶ್ ಶೆಟ್ಟರ್ (MP Jagadish Shettar) ಆಕ್ರೋಶ ವ್ಯಕ್ತಪಡಿಸಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಸುಹಾಸ್ ಶೆಟ್ಟಿ ಹತ್ಯೆ ದುಃಖದ ಸಂಗತಿ. ಆದರೆ ಕಾಂಗ್ರೆಸ್ ಸರ್ಕಾರ ಈ ವಿಷಯವನ್ನು ಗಂಭೀರವಾಗಿ ನೋಡುತ್ತಿಲ್ಲ. ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಕೊಲೆ, ಕೋಮು ಗಲಭೆಗಳು ಹೆಚ್ಚಾಗಿವೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ.” ಎಂದು ಹೇಳಿದರು.
ಅವರು ಮತ್ತಷ್ಟು ಹೇಳುತ್ತಾ, “ರಾಜ್ಯದಲ್ಲಿ ಯಾವುದೇ ಮುಂಜಾಗ್ರತಾ ಕ್ರಮಗಳು ತೆಗೆದುಕೊಳ್ಳಲಾಗುತ್ತಿಲ್ಲ. ಸರ್ಕಾರ ವಿಫಲವಾಗಿದೆ. ಮುಸ್ಲಿಂ ತುಷ್ಟೀಕರಣವೇ ಇಂತಹ ಘಟನೆಗಳಿಗೆ ಕಾರಣವಾಗಿದೆ. ತಪ್ಪು ಮಾಡಿದರೂ ಯಾರಿಗೂ ಭಯವಿಲ್ಲ ಎಂಬ ಸ್ಥಿತಿ ನಿರ್ಮಾಣವಾಗಿದೆ” ಎಂದರು.
ಪಿಎಫ್ಐ ವಿರುದ್ಧದ ಪ್ರಕರಣಗಳನ್ನು ವಾಪಸ್ ಪಡೆಯುವುದು ಸರಿಯಲ್ಲ ಎಂಬ ನಿರ್ಧಾರವನ್ನೂ ಅವರು ಪ್ರಶ್ನಿಸಿದರು. “ಹಳೆ ಹುಬ್ಬಳ್ಳಿ ಗಲಭೆ, ಡಿಜೆ ಹಳ್ಳಿ, ಮೈಸೂರು, ಶಿವಮೊಗ್ಗ ಪ್ರದೇಶಗಳಲ್ಲಿ ನಡೆದ ಗಲಭೆಗಳ ಕುರಿತಂತೆ ಪ್ರಕರಣಗಳನ್ನು ವಾಪಸ್ ಪಡೆಯಲಾಗಿದೆ. ಇದು ನ್ಯಾಯವ್ಯವಸ್ಥೆಗೆ ಧಕ್ಕೆಯಾಗಿದೆ” ಎಂದರು.
ಸಿಎಂ ಸಿದ್ಧರಾಮಯ್ಯ ಹೇಳಿಕೆಗಳನ್ನೂ ಅವರು ಟೀಕಿಸಿದರು. “ಪಾಕಿಸ್ತಾನ ವಿರುದ್ಧ ಯುದ್ಧ ಬೇಡ ಎಂಬ ಸಿಎಂ ಹೇಳಿಕೆ, ಸುಹಾಸ್ ಶೆಟ್ಟಿ ರೌಡಿ ಶೀಟರ್ ಎಂಬ ಅಭಿಪ್ರಾಯ, ಇವೆಲ್ಲಾ ಜವಾಬ್ದಾರಿಯಿಲ್ಲದ ಹೇಳಿಕೆಗಳು. ರೌಡಿ ಶೀಟರ್ ಅಂದರೆ ಹತ್ಯೆ ಮಾಡಬಹುದಾ? ಇಂತಹ ಹೇಳಿಕೆಗಳಿಂದ ಸರ್ಕಾರದ ನಡತೆ ಗಂಭೀರವಾಗಿ ಪ್ರಶ್ನೆಗೆ ಒಳಪಡುತ್ತವೆ” ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಅವರು ಕೇಂದ್ರ ತನಿಖಾ ದಳದ (CBI) ಮೂಲಕ ತನಿಖೆ ನಡೆಯಬೇಕು ಎಂದು ಆಗ್ರಹಿಸಿದರು. “ಇದೇನಾದರೂ ನ್ಯಾಯ ದೊರೆಯಲು ಸಾಧ್ಯವಾಗುತ್ತದೆ. ಶೆಟ್ಟಿ ಕುಟುಂಬಕ್ಕೆ ನ್ಯಾಯ ಸಿಗಬೇಕು” ಎಂದು ಹೇಳಿದರು.