back to top
21.3 C
Bengaluru
Tuesday, October 28, 2025
HomeKarnatakaCongress ಶಾಸಕರ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

Congress ಶಾಸಕರ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

- Advertisement -
- Advertisement -

Chikkamagaluru: ಶೃಂಗೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ ಅವರ ಮನೆ ಮತ್ತು ಕಚೇರಿಗಳ ಮೇಲೆ ಮಂಗಳವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದರು. ಹಾಸನ ಲೋಕಾಯುಕ್ತ ಎಸ್ಪಿ ಸ್ನೇಹಾ ಅವರ ನೇತೃತ್ವದಲ್ಲಿ ತಂಡವು ಬೆಂಗಳೂರಿನ ಹೊಸಮನೆ, ಚಿಕ್ಕಮಗಳೂರಿನ ಬಸಾಪುರ ಮತ್ತು ಹಲಸೂರು ತೋಟದ ನಿವಾಸದಲ್ಲಿ ಪರಿಶೀಲನೆ ನಡೆಸಿತು.

ಶಾಸಕರ ಟಿ.ಡಿ. ರಾಜೇಗೌಡ, ಪತ್ನಿ ಪುಷ್ಪಾ ಮತ್ತು ವಿದೇಶದಲ್ಲಿರುವ ಪುತ್ರರ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿದ್ದು, ಅವರ ಮೇಲೆ ವಿಚಾರಣೆ ಮತ್ತು ತನಿಖೆ ನಡೆಯುತ್ತಿದೆ.

 ಲೋಕಾಯುಕ್ತ ಅಧಿಕಾರಿಗಳು ನಾಲ್ಕು ವಾಹನಗಳಲ್ಲಿ ತಲುಪಿದ್ದು, ಮನೆ, ಕಚೇರಿ ಮತ್ತು ತೋಟಗಳಲ್ಲಿ ನಿಖರ ಶೋಧ ನಡೆಸಿ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಪರಿಶೀಲನೆ ಮುಂದುವರೆದಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಮಾಹಿತಿಯು ಹೊರಬರುವ ಸಾಧ್ಯತೆ ಇದೆ.

ಶಾಸಕ ರಾಜೇಗೌಡ 266 ಎಕರೆ ತೋಟವನ್ನು ಖರೀದಿಸಿದ್ದರು. ಈ ತೋಟದ ವಹಿವಾಟು ಕುರಿತು ಅಕ್ರಮ ಆಸ್ತಿ ಗಳಿಕೆಯ ಆರೋಪಗಳು ಎದುರಾಗಿದ್ದು, ಬಿಜೆಪಿ ಮುಖಂಡ ದಿನೇಶ್ ದೂರು ನೀಡಿದ್ದಾರೆ.

ಶಾಸಕನು ಚುನಾವಣೆ ವೇಳೆ ಸಲ್ಲಿಸಿದ ಆಸ್ತಿ ದಾಖಲೆಗಳು ಮತ್ತು ಭೂಮಿ ಖರೀದಿ ವಿವರಗಳು ತಾಳುತ್ತಿಲ್ಲವೆಂದು ಆರೋಪಿಸಲಾಗಿದೆ. ಅವರ ವಾರ್ಷಿಕ ಆದಾಯ 38 ಲಕ್ಷ ರೂಪಾಯಿ ಎಂದು ಅಫಿಡವಿಟ್ ನಲ್ಲಿ ತಿಳಿಸಿದ್ದರಿಂದ, ನೂರಾರು ಕೋಟಿ ರೂ. ಬೆಲೆಬಾಳುವ ಭೂಮಿ ಹೇಗೆ ಖರೀದಿಸಲಾಗಿದೆ ಎಂಬ ಪ್ರಶ್ನೆ ಉದ್ಭವಿಸಿದೆ.

ಬೆಂಗಳೂರು ಜನಪ್ರತಿನಿಧಿಗಳ ನ್ಯಾಯಾಲಯವು ಈ ಪ್ರಕರಣಕ್ಕೆ ಸಂಬಂಧಿಸಿ FIR ದಾಖಲಿಸುವಂತೆ ಎರಡು ವಾರಗಳ ಹಿಂದೆ ಆದೇಶ ನೀಡಿತ್ತು, ಮತ್ತು ಅದರಂತೆ ಎಫ್‌ಐಆರ್ ದಾಖಲಾಗಿತ್ತು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!

You cannot copy content of this page