back to top
20.1 C
Bengaluru
Wednesday, October 29, 2025
HomeKarnatakaLokayukta ದಾಳಿಗಳು: ಭ್ರಷ್ಟರಿಗೆ ಬಿಸಿ ಮುಟ್ಟಿದ ಅಧಿಕಾರಿಗಳು

Lokayukta ದಾಳಿಗಳು: ಭ್ರಷ್ಟರಿಗೆ ಬಿಸಿ ಮುಟ್ಟಿದ ಅಧಿಕಾರಿಗಳು

- Advertisement -
- Advertisement -

Bengaluru: ಜನವರಿ 8ರಂದು ಬೆಳಿಗ್ಗೆ ಬೆಂಗಳೂರಿನಲ್ಲಿ ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ (Lokayukta) ಅಧಿಕಾರಿಗಳಿಂದ ದಾಳಿ ನಡೆಯಿತು. ಒಟ್ಟು 8 ಅಧಿಕಾರಿಗಳ ಮನೆಗಳಲ್ಲಿ ಪರಿಶೀಲನೆ ನಡೆಸಲಾಗಿದೆ.

  • ಸಾರಿಗೆ ಇಲಾಖೆ ಜಂಟಿ ನಿರ್ದೇಶಕಿ ಶೋಭಾ ಮನೆ ಮೇಲೆ ದಾಳಿ
  • ಚಿಕ್ಕಮಗಳೂರು ಜಿಲ್ಲೆ ಕಡೂರು ವೈದ್ಯಾಧಿಕಾರಿ ಡಾ. ಎಸ್.ಎನ್ ಉಮೇಶ್ ಮನೆ ಮೇಲೆ ದಾಳಿ
  • ಬೀದರ್, ಬೆಳಗಾವಿ, ತುಮಕೂರು ಸೇರಿದಂತೆ ಹಲವು ಜಿಲ್ಲೆಗಳ ಅಧಿಕಾರಿಗಳ ಮನೆಗಳಿಗೆ ದಾಳಿ

ಗದಗ ಜಿಲ್ಲೆಯಲ್ಲಿ ವಿವಿಧ ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ ನಡೆದಿದ್ದು, ಇಲ್ಲಿನ ಇಂಜಿನಿಯರ್ ಹಾಗೂ ಆಡಳಿತಾಧಿಕಾರಿಗಳ ಮನೆ, ಕಚೇರಿ, ತೋಟದ ಮನೆ ಸೇರಿ ಪರಿಶೀಲನೆ ಮಾಡಲಾಗಿದೆ.

  • ಗದಗ-ಬೆಟಗೇರಿ ನಗರಸಭೆ ಇಂಜಿನಿಯರ್ ಹುಚ್ಚೇಶ್ ಬಂಡಿವಡ್ಡರ್ ಮನೆ ಮತ್ತು ಕಚೇರಿ ಮೇಲೆ ದಾಳಿ
  • ಗಜೇಂದ್ರಗಡ ಹಾಗೂ ಬಾಗಲಕೋಟೆ ಸೇರಿ ಐದು ಸ್ಥಳಗಳಲ್ಲಿ ಶೋಧ

ಬಳ್ಳಾರಿ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಕಾರ್ಯಾಚರಣೆ

  • ಬಳ್ಳಾರಿಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಮನೆ ಮೇಲೆ ದಾಳಿ.
  • ಬೆಳಗಾವಿಯ ಖಾನಾಪುರ ತಹಶೀಲ್ದಾರ್ ಪ್ರಕಾಶ್ ಗಾಯಕವಾಡ ಮನೆ ಸೇರಿ 6 ಸ್ಥಳಗಳಲ್ಲಿ ಪರಿಶೀಲನೆ.

ತುಮಕೂರು ನಿವೃತ್ತ RTO ಮೇಲೆ ದಾಳಿ

  • ತುಮಕೂರು ನಿವೃತ್ತ ಸಾರಿಗೆ ಅಧಿಕಾರಿಯೊಬ್ಬರ ಮನೆ ಮೇಲೆ ದಾಳಿ ನಡೆದಿದ್ದು, ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಕಾರ್ಯಾಚರಣೆ ನಡೆದಿದೆ.

ಲೋಕಾಯುಕ್ತ ಅಧಿಕಾರಿಗಳ ಈ ದಾಳಿಗಳು ರಾಜ್ಯಾದ್ಯಂತ ಭ್ರಷ್ಟಾಚಾರ ಆರೋಪದ ಮೇಲೆ ಜೋರಾಗಿ ನಡೆದಿದೆ. ಅಕ್ರಮ ಆಸ್ತಿ ಗಳಿಕೆ ಆರೋಪಗಳಿಗೆ ಸಂಬಂಧಿಸಿದಂತೆ ತನಿಖೆ ಮುಂದುವರೆಯುತ್ತಿದೆ.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!

You cannot copy content of this page