Home Karnataka ಮೇ 14ರಂದು CSB ರಚನೆ ಕುರಿತ ಸಭೆ: High Court ಗೆ ರಾಜ್ಯದ ಮಾಹಿತಿ

ಮೇ 14ರಂದು CSB ರಚನೆ ಕುರಿತ ಸಭೆ: High Court ಗೆ ರಾಜ್ಯದ ಮಾಹಿತಿ

High Court

Bengaluru: IAS ಅಧಿಕಾರಿಗಳ ಕನಿಷ್ಠ ಸೇವಾವಧಿ, ವರ್ಗಾವಣೆ ಮತ್ತು ಕರ್ತವ್ಯಗಳ ನಿರ್ವಹಣೆಗೆ ಸಂಬಂಧಿಸಿದ ನಾಗರಿಕ ಸೇವಾ ಮಂಡಳಿ (CSB) ರಚನೆ ಬಗ್ಗೆ ಮೇ 14ರಂದು ಸಭೆ ನಡೆಯಲಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ (High Court) ತಿಳಿಸಿದೆ.

ಸುಪ್ರೀಂ ಕೋರ್ಟ್ ಸೂಚನೆಯಂತೆ, ಕರ್ನಾಟಕದಲ್ಲಿ ಸಿಎಸ್ಬಿ ರಚನೆಯಾಗಬೇಕು ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದರಲ್ಲಿ ಬ್ಯಾನರ್‍ಘಟ್ಟ ನಿವಾಸಿ ಹಾಗೂ ಸಾಮಾಜಿಕ ಕಾರ್ಯಕರ್ತ ರಿಷಬ್ ಟ್ರಾಕ್ರೂ ಕೋರಿ ಇದ್ದರು.

ಈ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ. ಅರವಿಂದ್ ಅವರಿದ್ದ ನ್ಯಾಯಪೀಠಕ್ಕೆ ಸರ್ಕಾರದ ಪರ ವಕೀಲರು ಮಾಹಿತಿ ನೀಡಿದರು.

ಏಪ್ರಿಲ್ 23ರಂದು ಈ ವಿಷಯಕ್ಕೆ ಸಂಬಂಧಿಸಿದಂತೆ ಸಚಿವ ಉಪಸಮಿತಿಯ ಸಭೆ ನಡೆದಿತ್ತು. ಆದರೆ, ಕೋರಂ ಇಲ್ಲದ ಕಾರಣ ನಿರ್ಧಾರವಾಗಿಲ್ಲ. ಆದ್ದರಿಂದ ಮೇ 14ಕ್ಕೆ ಸಭೆ ಮುಂದೂಡಲಾಗಿದೆ ಎಂದು ಅವರು ನ್ಯಾಯಾಲಯಕ್ಕೆ ತಿಳಿಸಿದರು.

ಅರ್ಜಿದಾರರ ಪರ ವಕೀಲರು, “ಈ ವರ್ಷ ವರ್ಗಾವಣೆ ಪ್ರಕ್ರಿಯೆ ಆರಂಭವಾಗಿದೆ. ಸಿಎಸ್ಬಿ ರಚನೆಯಾಗುವವರೆಗೆ ವರ್ಗಾವಣೆಗಳನ್ನು ತಾತ್ಕಾಲಿಕವಾಗಿ ನಿಲ್ಲಿಸಿ, ಮಂಡಳಿ ರಚನೆಯ ಬಳಿಕ ಮಾತ್ರ ಮುಂದುವರಿಸಬೇಕು” ಎಂದು ನ್ಯಾಯಾಲಯವನ್ನು ಕೇಳಿದರು.

ಅದಕ್ಕೆ ಪ್ರತಿಯಾಗಿ ನ್ಯಾಯಪೀಠ, “ಇದು ಗಗನಯಾನ ತಂತ್ರಜ್ಞಾನವಲ್ಲ. ಈ ನಿರ್ಧಾರಕ್ಕೆ ಹೆಚ್ಚು ಸಮಯ ಬೇಕಿಲ್ಲ” ಎಂದು ಸರ್ಕಾರವನ್ನು ಎಚ್ಚರಿಸಿದೆ. ಸರ್ಕಾರ ಈ ವಿಷಯದಲ್ಲಿ ಪ್ರಗತಿ ತೋರಿಲ್ಲ ಎಂದು ತಿಳಿಸಿ, ವಿಚಾರಣೆಯನ್ನು ಜೂನ್ 4ಕ್ಕೆ ಮುಂದೂಡಿತು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.

You cannot copy content of this page

Exit mobile version