Home Karnataka Muda case ದೂರುದಾರ ಸ್ನೇಹಮಯಿ ಕೃಷ್ಣ ನಾಪತ್ತೆ

Muda case ದೂರುದಾರ ಸ್ನೇಹಮಯಿ ಕೃಷ್ಣ ನಾಪತ್ತೆ

148
MUDA Scam

Bengaluru: ಕರ್ನಾಟಕದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದ್ದ ಮುಡಾ ಹಗರಣದ (Muda case) ಪ್ರಮುಖ ದೂರುದಾರರಾದ ಸ್ನೇಹಮಯಿ ಕೃಷ್ಣ ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ. ಚಾಮುಂಡಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ವಿರುದ್ಧ ಸೀರೆ ಕಳ್ಳತನದ ಆರೋಪ ಮಾಡಿದ್ದ ಅವರು, ಆ ಆರೋಪದ ಬೆನ್ನಲ್ಲೇ ತಾವು ನಾಪತ್ತೆಯಾಗಿದ್ದಾರೆ.

ಸ್ನೇಹಮಯಿ ಕೃಷ್ಣ ಅವರು, ಚಾಮುಂಡೇಶ್ವರಿ ದೇವಿಗೆ ಉಡುಗೊರೆಯಾಗಿ ನೀಡಿದ ಲಕ್ಷಾಂತರ ರೂಪಾಯಿ ಮೌಲ್ಯದ ಸೀರೆಗಳನ್ನು ಮಾರಾಟ ಮಾಡಿದ ಪ್ರಭಾವಶಾಲಿ ಅಧಿಕಾರಿಯ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಇತ್ತೀಚೆಗೆ ಈ ಬಗ್ಗೆ ಮೈಸೂರಿನ ಕೃಷ್ಣರಾಜ ಪೊಲೀಸ್ ಠಾಣೆಗೆ ದೂರು ನೀಡಿದಿದ್ದರು.

ನಾಪತ್ತೆಯಾದ ಕೃಷ್ಣರ ಮೊಬೈಲ್ ಹೀಗೆಯೇ ಮೂರು ದಿನಗಳಿಂದ ಸ್ವಿಚ್ ಆಫ್ ಆಗಿದೆ ಎನ್ನಲಾಗಿದೆ. ಇದರಿಂದ, ಪೊಲೀಸರು ಅವರನ್ನು ಹುಡುಕಲು ಕಾರ್ಯಾಚರಣೆ ಆರಂಭಿಸಿದ್ದಾರೆ.

ಸ್ನೇಹಮಯಿ ಕೃಷ್ಣ, ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಅವರ ವಿರುದ್ಧ FIR ದಾಖಲಿಸುವಂತೆ ಕೋರಿದ್ದು, ಇದೀಗ ಅವರು ಸುದ್ದಿಯಲ್ಲಿದ್ದಾರೆ.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

You cannot copy content of this page