back to top
22.3 C
Bengaluru
Wednesday, September 17, 2025
HomeKarnatakaMuda Scam: ಮಾಜಿ ಆಯುಕ್ತ ದಿನೇಶ್ ಕುಮಾರ್ ED ವಶಕ್ಕೆ

Muda Scam: ಮಾಜಿ ಆಯುಕ್ತ ದಿನೇಶ್ ಕುಮಾರ್ ED ವಶಕ್ಕೆ

- Advertisement -
- Advertisement -

Bengaluru/Mysore: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (Muda scam) ಹಗರಣ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಮುಡಾದ ಮಾಜಿ ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ಅವರನ್ನು ಇಡಿ ಅಧಿಕಾರಿಗಳು ವಿಚಾರಣೆ ನಂತರ ವಶಕ್ಕೆ ಪಡೆದಿದ್ದಾರೆ.

ಇಂದು (ಸೆಪ್ಟೆಂಬರ್ 16) ದಿನೇಶ್ ಕುಮಾರ್ ಅವರು ಬೆಂಗಳೂರಿನ ಶಾಂತಿನಗರದಲ್ಲಿರುವ ಇಡಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದರು. ವಿಚಾರಣೆ ನಡೆಸಿದ ಅಧಿಕಾರಿಗಳು ನಂತರ ಅವರನ್ನು ವಶದಲ್ಲಿಟ್ಟಿದ್ದಾರೆ.

ಮುಡಾದಲ್ಲಿ ಅಕ್ರಮ ಸೈಟ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿ ಲೋಕಾಯುಕ್ತ ತನಿಖೆಗೆ ಅನುಮತಿ ನೀಡುವಂತೆ ಕೋರಲಾಗಿತ್ತು. ರಾಜ್ಯ ಸರ್ಕಾರ ದಿನೇಶ್ ಕುಮಾರ್ ವಿರುದ್ಧ ತನಿಖೆಗೆ ಹಸಿರು ನಿಶಾನೆ ನೀಡಿದ್ದರಿಂದ, ಇಡಿ ಮುಂದಾಗಿದ್ದು ವಶಕ್ಕೆ ಪಡೆದಿದೆ.

ಇಡಿ ಹೇಳುವಂತೆ, ದಿನೇಶ್ ಕುಮಾರ್ ನಕಲಿ ದಾಖಲೆಗಳನ್ನು ಸೃಷ್ಟಿಸಿ ಸೈಟ್ ಮರುಹಂಚಿಕೆ ಮಾಡಿ ಲಾಭ ಪಡೆದಿದ್ದಾರೆ. 2022ರಲ್ಲಿ ಆಯುಕ್ತರಾಗಿದ್ದ ದಿನೇಶ್ ಅವರ ವಿರುದ್ಧ 50:50 ಸೈಟ್ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಲಾಗಿದೆ. ಈ ಕಾರಣಕ್ಕೆ ಸರ್ಕಾರ ಅವರು ಆ ಹುದ್ದೆಯಿಂದ ಅವರನ್ನು ವರ್ಗಾವಣೆ ಮಾಡಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಡಿ ದಿನೇಶ್ ಅವರಿಗೆ ಸೇರಿದ ಆಸ್ತಿಗಳನ್ನು ಜಪ್ತಿ ಮಾಡಿದೆ. ಇನ್ನು ಕೋರ್ಟ್ ಕೂಡಾ ಮುಡಾ ಹಗರಣದ ತನಿಖೆ ವಿಳಂಬವಾಗಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದೆ. meanwhile, ದಿನೇಶ್ ವಿರುದ್ಧದ ಪ್ರಕರಣ ಹೈಕೋರ್ಟ್ ವರೆಗೂ ತಲುಪಿದೆ.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!

You cannot copy content of this page