Bengaluru: 2021ರಲ್ಲಿ ರಾಜ್ಯದಲ್ಲಿ ಜಾರಿಗೊಳಿಸಿದ NEP ನೀತಿ ಬದಲಾಗಿ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಎಸ್ಇಪಿ (SEP) ಜಾರಿಗೆ ತಯಾರಾಗಿತ್ತು. ಪ್ರೊ. ಸುಖದೇವ್ ಥೋರಟ್ ನೇತೃತ್ವದ ಸಮಿತಿ ಈ ನೂತನ ನೀತಿಯ (New Education Policy) ಬಗ್ಗೆ ವರದಿ ತಯಾರಿಸಿ ಸರ್ಕಾರಕ್ಕೆ ನೀಡಿತು.
ಈ ವರದಿಯಲ್ಲಿ ಕಡಿಮೆ ಆದಾಯದ ಮುಸ್ಲಿಂ ವಿದ್ಯಾರ್ಥಿಗಳಿಗೆ ಪೂರ್ಣ ಆರ್ಥಿಕ ನೆರವು ಮತ್ತು ಗ್ರಾಮೀಣ ಮುಸ್ಲಿಂ ಹೆಣ್ಣುಮಕ್ಕಳ ದಾಖಲಾತಿಯನ್ನು ಹೆಚ್ಚಿಸುವಂತೆ ಶಿಫಾರಸು ಮಾಡಲಾಗಿದೆ.
ಈ ಶಿಫಾರಸುಗಳು ಕೆಲವು ಪೋಷಕರು, ಶಾಲೆಗಳು ಮತ್ತು ಹಿಂದೂಪರ ಸಂಘಟನೆಗಳಿಂದ ವಿರೋಧಕ್ಕೆ ಕಾರಣವಾಗಿದೆ. ಶಿಕ್ಷಣದಲ್ಲಿ ಧರ್ಮ ಆಧಾರಿತ ಭೇದಾಭಿಮಾನ ಮಾಡಬಾರದು ಎಂದು ಆಗ್ರಹಿಸಲಾಗುತ್ತಿದೆ. ಖಾಸಗಿ ಶಾಲೆಗಳು ಮತ್ತು ಪೋಷಕರಿಂದ ಕೂಡ ವಿರೋಧ ಕೇಳಿ ಬಂದಿದೆ.
ಈ ವಿರುದ್ಧದ ಆಕ್ರೋಶದ ನಡುವೆ ಸರ್ಕಾರವು ಎಸ್ಇಪಿ ಸಮಿತಿಯ ವರದಿಯನ್ನು ಪರಿಶೀಲಿಸಿ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ.