Home Karnataka Belagavi “ಕಾಂಗ್ರೆಸ್ ಕಾರ್ಯಕ್ರಮವಲ್ಲ, ದೇಶದ ಹಿತದ ಚಿಂತನೆ”– DCM D.K. Shivakumar

“ಕಾಂಗ್ರೆಸ್ ಕಾರ್ಯಕ್ರಮವಲ್ಲ, ದೇಶದ ಹಿತದ ಚಿಂತನೆ”– DCM D.K. Shivakumar

D K Shivakumar

Belagavi: ಸ್ವಾತಂತ್ರ್ಯ ಹೋರಾಟದ ಮಹತ್ವವನ್ನು ಸ್ಮರಿಸಲು ಹಾಗೂ ದೇಶದ ಮುಂದಿನ ದಿಕ್ಕು ಕುರಿತು ಚರ್ಚಿಸಲು ನಾವು ಈ ಕಾರ್ಯಕ್ರಮವನ್ನು ರೂಪಿಸಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DCM D.K. Shivakumar) ಹೇಳಿದರು. “ಈ ಕಾರ್ಯಕ್ರಮ ಕೇವಲ ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಸೀಮಿತವಲ್ಲ; ಇದು ಎಲ್ಲರ ಕಾರ್ಯಕ್ರಮ,” ಎಂದು ಹೇಳಿದರು.

ಕಾರ್ಯಕ್ರಮ ವಿವರಗಳು

ಡಿ. 26:

  • ಬೆಳಗ್ಗೆ 10:00: ವೀರಸೌಧದಲ್ಲಿ ಗಾಂಧಿ ಪುತ್ಥಳಿ ಅನಾವರಣ.
  • ಬೆಳಗ್ಗೆ 10:45: ಛಾಯಾಚಿತ್ರ ಪ್ರದರ್ಶನ ಉದ್ಘಾಟನೆ.
  • ಬೆಳಗ್ಗೆ 11:15: ಗಂಗಾಧರ ದೇಶಪಾಂಡೆ ಸ್ಮಾರಕ ಅನಾವರಣ.
  • ಮಧ್ಯಾಹ್ನ 3:00: ಕಾರ್ಯಕಾರಿ ಸಮಿತಿ ಸಭೆ.
  • ರಾತ್ರಿ 7:00: ಎಐಸಿಸಿ ಅಧ್ಯಕ್ಷರಿಂದ ಭೋಜನಕೂಟ.

ಡಿ. 27:

  • ಬೆಳಗ್ಗೆ 10:30: ಸುವರ್ಣಸೌಧದಲ್ಲಿ ಗಾಂಧಿ ಪ್ರತಿಮೆಯ ಅನಾವರಣ. ಈ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ ಹಾಗೂ ವಿವಿಧ ನಾಯಕರು ಭಾಗವಹಿಸಲಿದ್ದಾರೆ.
  • ಮಧ್ಯಾಹ್ನ 12:00: ಸಿಎಂ ನೇತೃತ್ವದಲ್ಲಿ ಔತಣಕೂಟ.
  • ಮಧ್ಯಾಹ್ನ 1:00: ಸಾರ್ವಜನಿಕ ಸಮಾವೇಶ.

ಜಗದೀಶ ಶೆಟ್ಟರ್ ಅವರ “ಗಾಂಧಿ ಪ್ರತಿಮೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಿಲ್ಲ” ಎಂಬ ಆರೋಪಕ್ಕೆ ಪ್ರತಿಯಾಗಿ ಡಿಸಿಎಂ ಶಿವಕುಮಾರ್ ಹೇಳಿದರು: ” ಅವರ ಮನೆವರೆಗೂ ರತ್ನಗಂಬಳಿ ಹಾಕಿಸೋಣ. ನನ್ನ ಸಮ್ಮುಖದಲ್ಲೇ ಮುಖ್ಯಮಂತ್ರಿಗಳು ಅವರಿಗೆ ಕರೆ ಮಾಡಿ ಆಹ್ವಾನ ನೀಡಿದ್ದಾರೆ. ಆರ್.ಅಶೋಕ್, ನಾರಾಯಣಸ್ವಾಮಿ, ಸಭಾಪತಿಗಳಿಗೆ ಆಹ್ವಾನ ನೀಡಿದ್ದಾರೆ. ಆಹ್ವಾನ ಪತ್ರಿಕೆಯಲ್ಲಿ ಅವರ ಹೆಸರು ಸೇರಿಸಿದ್ದೇವೆ ಎಂದು ಹೇಳಿದರು.”

“ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಹ ಈ ರೀತಿಯ ಕಾರ್ಯಕ್ರಮ ನಡೆಸಲು ಮುಂದಾಗಬೇಕು. ನಾವು ಈ ಕಾರ್ಯಕ್ರಮವನ್ನು ಒಂದು ವರ್ಷ ಪೂರ್ತಿಯಾಗಿ ಆಚರಿಸುತ್ತೇವೆ,” ಎಂದು ಅವರು ಹೇಳಿದರು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.

You cannot copy content of this page

Exit mobile version