Bengaluru: ಪಾಕಿಸ್ತಾನದ ಉಗ್ರರ ವಿರುದ್ಧ ಭಾರತೀಯ ಸೇನೆ ನಡೆಸಿದ ಕ್ಷಿಪಣಿ ದಾಳಿಯ ಪರಿಣಾಮವಾಗಿ ದೇಶದ ವಿವಿಧ ಕಡೆಗಳಲ್ಲಿ ವಿಮಾನ ಸಂಚಾರಕ್ಕೆ ತಾತ್ಕಾಲಿಕ ತೊಂದರೆ ಉಂಟಾಗಿದೆ. ಕೇಂದ್ರ ಸರ್ಕಾರದ ಸೂಚನೆಯಂತೆ ಮುಂಜಾಗ್ರತಾ ಕ್ರಮವಾಗಿ ಹಲವಾರು ವಿಮಾನಗಳನ್ನು (Bengaluru airport) ರದ್ದುಪಡಿಸಲಾಗಿದೆ.
ಬೆಂಗಳೂರುನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಜಮ್ಮು-ಕಾಶ್ಮೀರ, ಜೋಧಪುರ್ (ರಾಜಸ್ಥಾನ), ಅಯೋಧ್ಯೆ, ಲಖನೌ ಮತ್ತು ಘಾಜಿಯಾಬಾದ್ (ಉತ್ತರ ಪ್ರದೇಶ) ಕಡೆಗೆ ಹೋಗಬೇಕಿದ್ದ ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ.
ವಿಮಾನ ನಿಲ್ದಾಣದಿಂದ ಪ್ರಕಟವಾದ ಟ್ವೀಟ್ನಲ್ಲಿ, “ಇದೀಗ ದೇಶದ ಕೆಲವು ವಾಯುಯಾನ ಪ್ರದೇಶಗಳಲ್ಲಿ ವಿಮಾನ ಹಾರಾಟಕ್ಕೆ ನಿರ್ಬಂಧ ವಿಧಿಸಲಾಗಿದೆ. ಇದರಿಂದ ಕೆಲವು ವಿಮಾನಗಳ ಸೇವೆಗೆ ತೊಂದರೆ ಆಗಬಹುದು,” ಎಂದು ತಿಳಿಸಲಾಗಿದೆ.
ಪ್ರಯಾಣಿಕರಿಗೆ ನೀಡಿದ ಸೂಚನೆ ಪ್ರಕಾರ, ವಿಮಾನ ನಿಲ್ದಾಣಕ್ಕೆ ಹೊರಡುವ ಮೊದಲು ತಮ್ಮ ವಿಮಾನಗಳ ವೇಳಾಪಟ್ಟಿ ಹಾಗೂ ಸ್ಥಿತಿಯನ್ನು ಆಯಾ ವಿಮಾನಯಾನ ಸಂಸ್ಥೆಗಳೊಂದಿಗೆ ಪರಿಶೀಲಿಸುವಂತೆ ಸಲಹೆ ನೀಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಅವರು ವಿಮಾನ ಸಂಸ್ಥೆಗಳ ಅಧಿಕೃತ ಟ್ವಿಟರ್ ಖಾತೆಗಳನ್ನು ಸಂಪರ್ಕಿಸಬಹುದು.