Home News Pahalgam terror attack: ಪಾಕ್ – ಭಾರತ ಸಂಯಮ ತೋರಲಿ ಎಂದ European Union

Pahalgam terror attack: ಪಾಕ್ – ಭಾರತ ಸಂಯಮ ತೋರಲಿ ಎಂದ European Union

EU HRVP Kaja Kallas-Jaishankar

New Delhi: ಪಹಲ್ಗಾಮ್ ನಲ್ಲಿ ಉಗ್ರರ ದಾಳಿ ನಂತರ, (Pahalgam terror attack) ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನ ಸ್ಥಿತಿ ಉಂಟಾಗಿದೆ. ಭಾರತ ಪ್ರತಿಕಾರಕ್ಕಾಗಿ ಸಿದ್ಧತೆ ನಡೆಸಿದೆ. ಈ ಪರಿಸ್ಥಿತಿಯನ್ನು ಗಮನಿಸಿರುವ ಯುರೋಪಿಯನ್ ಒಕ್ಕೂಟ, ಎರಡು ದೇಶಗಳು ಸಂಯಮ ತೋರಿಸಿ, ಮಾತುಕತೆ ನಡೆಸಬೇಕು ಎಂದು ಕರೆ ನೀಡಿದೆ.

ಯುರೋಪಿಯನ್ ಒಕ್ಕೂಟದ ವಿದೇಶಾಂಗ ವ್ಯವಹಾರಗಳ ಉನ್ನತ ಪ್ರತಿನಿಧಿ ಕಾಜಾ ಕಲ್ಲಾಸ್, ಭಾರತೀಯ ವಿದೇಶಾಂಗ ಸಚಿವ ಎಸ್. ಜೈಶಂಕರ್ ಹಾಗೂ ಪಾಕಿಸ್ತಾನದ ಉಪ ಪ್ರಧಾನಿ ಇಶಾಕ್ ದಾರ್ ಅವರನ್ನು ಪ್ರತ್ಯೇಕವಾಗಿ ಕರೆ ಮಾಡಿ, ದೇಶಗಳ ನಡುವೆ ಉದ್ವಿಗ್ನತೆ ಆತಂಕಕಾರಿಯಾಗಿದೆ ಎಂದು ಹೇಳಿದ್ದಾರೆ. ಅವರು ಎರಡು ದೇಶಗಳ ನಡುವಿನ ಮಾತುಕತೆಗಳಿಗೆ ಅಗತ್ಯವಿರುವ ಮಹತ್ವವನ್ನು ಮುಟ್ಟಿಸಿದ್ದಾರೆ.

ಪಹಲ್ಗಾಮ್ ದಾಳಿಗೆ ಸಂಬಂಧಿಸಿದಂತೆ ಯುರೋಪಿಯನ್ ಒಕ್ಕೂಟವು ಬಲವಾದ ಖಂಡನೆಯನ್ನು ವ್ಯಕ್ತಪಡಿಸಿದೆ. ಜೈಶಂಕರ್ ಮತ್ತು ಕಲ್ಲಾಸ್ ನಡುವಿನ ಚರ್ಚೆಯಲ್ಲಿ, ಪಹಲ್ಗಾಮ್ ದಾಳಿಯ ಕುರಿತು ಮಾತನಾಡಿ, ಉದ್ವಿಗ್ನತೆ ಹೆಚ್ಚಿದರೆ ಯಾವುದೇ ಪ್ರಯೋಜನವೂ ಇಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಕೂಡ ಪಹಲ್ಗಾಮ್ ದಾಳಿಯ ಕುರಿತು, ಭಾರತ ಮತ್ತು ಪಾಕಿಸ್ತಾನ ಒಟ್ಟಾಗಿ ಶಾಂತಿ ಸಾಧಿಸಲು ಕೆಲಸ ಮಾಡಬೇಕೆಂದು ಹೇಳಿದರು.

ಭದ್ರತಾ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಭಯೋತ್ಪಾದನೆಗೆ ಬಲವಾದ ಪ್ರತಿಕಾರ ನೀಡಲು ತಾವು ಸಂಪೂರ್ಣ ನಂಬಿಕೆ ಮತ್ತು ವಿಶ್ವಾಸ ಹೊಂದಿರುವುದಾಗಿ ತಿಳಿಸಿದ್ದಾರೆ.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.

You cannot copy content of this page

Exit mobile version