ಇಂದು ಸಂಸತ್ತಿನ ಬಜೆಟ್ ಅಧಿವೇಶನದ ಮೊದಲ ದಿನವಾಗಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು (President Droupadi Murmu) ಉಭಯ ಸದನಗಳನ್ನುದ್ದೇಶಿಸಿ ಭಾಷಣ ಆರಂಭಿಸಿದ್ದಾರೆ. ಫೆಬ್ರವರಿ 1 ರಂದು ಕೇಂದ್ರ ಬಜೆಟ್ ಮಂಡನೆಯಾಗಲಿದೆ.
ಫೆಬ್ರವರಿ 5 ರಂದು ದೆಹಲಿಯಲ್ಲಿ ವಿಧಾನಸಭಾ ಚುನಾವಣೆಯಿರುವ ಕಾರಣ ಸಂಸತ್ ಕಲಾಪ ನಡೆಯುವುದಿಲ್ಲ. ಸರ್ಕಾರ ಬಜೆಟ್ ಅಧಿವೇಶನಕ್ಕೆ 16 ಮಸೂದೆಗಳ ಪಟ್ಟಿಯನ್ನು ಸಿದ್ಧಪಡಿಸಿದೆ.
ಇಂದು ಮಧ್ಯಾಹ್ನ 12 ಗಂಟೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಆರ್ಥಿಕ ಸಮೀಕ್ಷೆ ಮಂಡಿಸಲಿದ್ದಾರೆ. ಅಧಿವೇಶನದ ಮೊದಲ ಭಾಗ ಫೆಬ್ರವರಿ 13 ರಂದು ಕೊನೆಗೊಳ್ಳಲಿದೆ. ಎರಡನೇ ಭಾಗ ಮಾರ್ಚ್ 10 ರಿಂದ ಆರಂಭವಾಗಿ ಏಪ್ರಿಲ್ 4 ರಂದು ಮುಕ್ತಾಯಗೊಳ್ಳಲಿದೆ.
ರಾಷ್ಟ್ರಪತಿ ಭಾಷಣದ ಮೇಲೆ ಮೂರು ದಿನಗಳ ಕಾಲ ಚರ್ಚೆ ನಡೆಯಲಿದೆ.