Ramanagara : ರಾಮನಗರ ನಗರದ ಐಜೂರು ವೃತ್ತದಲ್ಲಿ ಶುಕ್ರವಾರ ಮೇಕೆದಾಟು ಯೋಜನೆ (Mekedatu project) ಅನುಷ್ಠಾನಕ್ಕೆ ಒತ್ತಾಯಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ (Vatal Nagaraj) ನೇತೃತ್ವದಲ್ಲಿ ಪ್ರತಿಭಟನೆ (Protest) ನಡೆಸಲಾಯಿತು.
ಸುದ್ಧಿಗಾರರೊಂದಿಗೆ ಮಾತನಾಡಿದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜು ” ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಯೋಜನಾ ವರದಿಯನ್ನು ಈ ಹಿಂದೆಯೇ ಕೊಟ್ಟಿದ್ದು ಕೇಂದ್ರ ಸರ್ಕಾರ ತಮಿಳುನಾಡಿನಲ್ಲಿ ನೆಲೆ ಕಂಡುಕೊಳ್ಳುವ ಸಲುವಾಗಿ ಈ ವರದಿಯನ್ನು ಮೂಲೆ ಗುಂಪು ಮಾಡಿ ಆ ರಾಜ್ಯದ ಪರ ನಿಂತಿದೆ. ಮೇಕೆದಾಟಿನಲ್ಲಿ ಜಲಾಶಯ ನಿರ್ಮಾಣಕ್ಕೆ ತಮಿಳುನಾಡು ಅಡ್ಡಿಪಡಿಸುತ್ತಿರುವುದನ್ನು ಖಂಡಿಸಿ ಇದೇ 19ರಂದು ಚಾಮರಾಜನಗರ-ತಮಿಳುನಾಡು ಗಡಿ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುತ್ತದೆ” ಎಂದು ಹೇಳಿದರು.
ಕರುನಾಡ ಸೇನೆ ರಾಜ್ಯ ಉಪಾಧ್ಯಕ್ಷ ಎಂ.ಜಗದೀಶ್, ಕರುನಾಡ ವಿಜಯ ಸೇನೆಯ ದೀಪಕ್, ಭಾರತೀಯ ಸೇವಾ ಸಮಿತಿಯ ರಾಮಚಂದ್ರ, ಸ್ಥಳೀಯರಾದ ಗಾಯತ್ರಿಬಾಯಿ, ಚಂದ್ರಕಲಾ, ಶಿವಪ್ರಸಾದ್ ಮತಿತ್ತರರು ಪ್ರತಿಭಟನೆಯಲ್ಲಿ ಭಾಗವಹಿಸಿದರು.