back to top
23.3 C
Bengaluru
Monday, July 14, 2025
HomeKarnatakaRamanagaraಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ವಾಟಾಳ್‌ ನಾಗರಾಜ್ ಪ್ರತಿಭಟನೆ

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ವಾಟಾಳ್‌ ನಾಗರಾಜ್ ಪ್ರತಿಭಟನೆ

- Advertisement -
- Advertisement -

Ramanagara : ರಾಮನಗರ ನಗರದ ಐಜೂರು ವೃತ್ತದಲ್ಲಿ ಶುಕ್ರವಾರ ಮೇಕೆದಾಟು ಯೋಜನೆ (Mekedatu project) ಅನುಷ್ಠಾನಕ್ಕೆ ಒತ್ತಾಯಿಸಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್ (Vatal Nagaraj) ನೇತೃತ್ವದಲ್ಲಿ ಪ್ರತಿಭಟನೆ (Protest) ನಡೆಸಲಾಯಿತು.

ಸುದ್ಧಿಗಾರರೊಂದಿಗೆ ಮಾತನಾಡಿದ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜು ” ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಯೋಜನಾ ವರದಿಯನ್ನು ಈ ಹಿಂದೆಯೇ ಕೊಟ್ಟಿದ್ದು ಕೇಂದ್ರ ಸರ್ಕಾರ ತಮಿಳುನಾಡಿನಲ್ಲಿ ನೆಲೆ ಕಂಡುಕೊಳ್ಳುವ ಸಲುವಾಗಿ ಈ ವರದಿಯನ್ನು ಮೂಲೆ ಗುಂಪು ಮಾಡಿ ಆ ರಾಜ್ಯದ ಪರ ನಿಂತಿದೆ. ಮೇಕೆದಾಟಿನಲ್ಲಿ ಜಲಾಶಯ ನಿರ್ಮಾಣಕ್ಕೆ ತಮಿಳುನಾಡು ಅಡ್ಡಿಪಡಿಸುತ್ತಿರುವುದನ್ನು ಖಂಡಿಸಿ ಇದೇ 19ರಂದು ಚಾಮರಾಜನಗರ-ತಮಿಳುನಾಡು ಗಡಿ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುತ್ತದೆ” ಎಂದು ಹೇಳಿದರು.

ಕರುನಾಡ ಸೇನೆ ರಾಜ್ಯ ಉಪಾಧ್ಯಕ್ಷ ಎಂ.ಜಗದೀಶ್, ಕರುನಾಡ ವಿಜಯ ಸೇನೆಯ ದೀಪಕ್, ಭಾರತೀಯ ಸೇವಾ ಸಮಿತಿಯ ರಾಮಚಂದ್ರ, ಸ್ಥಳೀಯರಾದ ಗಾಯತ್ರಿಬಾಯಿ, ಚಂದ್ರಕಲಾ, ಶಿವಪ್ರಸಾದ್ ಮತಿತ್ತರರು ಪ್ರತಿಭಟನೆಯಲ್ಲಿ ಭಾಗವಹಿಸಿದರು.

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!

You cannot copy content of this page