back to top
25.2 C
Bengaluru
Friday, July 18, 2025
HomeKarnatakaBommai ಗೆ High Court ನಿಂದ ರಿಲೀಫ್: Waqf ಕುರಿತು ನೀಡಿದ ಹೇಳಿಕೆಗೆ ಸಂಬಂಧಿಸಿದ ಕೇಸ್...

Bommai ಗೆ High Court ನಿಂದ ರಿಲೀಫ್: Waqf ಕುರಿತು ನೀಡಿದ ಹೇಳಿಕೆಗೆ ಸಂಬಂಧಿಸಿದ ಕೇಸ್ ರದ್ದು

- Advertisement -
- Advertisement -

Bengaluru: ವಕ್ಫ್ ಆಸ್ತಿಗಳ ಕುರಿತು ನೀಡಿದ್ದ ಹೇಳಿಕೆಯ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ವಿರುದ್ಧದ ಎರಡು ಕೇಸ್‌ಗಳನ್ನು ಹೈಕೋರ್ಟ್ (High Court) ರದ್ದುಗೊಳಿಸಿದೆ. ಈ ಪ್ರಕರಣದಲ್ಲಿ ಪ್ರಚೋದನಕಾರಿ ಅಂಶಗಳಿಲ್ಲ ಎಂದು ಹಿರಿಯ ವಕೀಲರು ಹೈಕೋರ್ಟ್ ನಲ್ಲಿ ವಾದಿಸಿದ್ದರು. ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರ ಪೀಠ ಈ ಬಗ್ಗೆ ಶುಕ್ರವಾರ ಆದೇಶ ಹೊರಡಿಸಿದೆ.

ಈ ಪ್ರಕರಣಗಳು ಹಾವೇರಿ ಜಿಲ್ಲೆಯ ಸವಣೂರು ಮತ್ತು ಶಿಗ್ಗಾಂವಿ ಪೊಲೀಸ್ ಠಾಣೆಗಳಲ್ಲಿ 2024ರಲ್ಲಿ ದಾಖಲಾಗಿದ್ದವು. ಬಳಿಕ ಬೊಮ್ಮಾಯಿ ಅವರು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ಎರಡು ಕೇಸ್‌ಗಳನ್ನು ರದ್ದುಪಡಿಸಿದೆ. ಈ ಮೂಲಕ ಬೊಮ್ಮಾಯಿಗೆ ನ್ಯಾಯಾಲಯದಿಂದ ದೊಡ್ಡ ರಿಲೀಫ್ ಸಿಕ್ಕಿದೆ.

ವಕ್ಫ್ ಮಂಡಳಿ ವಿರುದ್ಧ 2024ರ ನವೆಂಬರ್‌ನಲ್ಲಿ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿತ್ತು. ಈ ಸಂದರ್ಭದಲ್ಲಿ ಬೊಮ್ಮಾಯಿ “ಸವಣೂರಿನಲ್ಲಿ ಎಲ್ಲಿಗೆ ಕಲ್ಲು ಎಸೆದರೂ ಅದು ವಕ್ಫ್ ಭೂಮಿಗೆ ಬಿದ್ದಂತೆ ಆಗುತ್ತದೆ” ಎಂದು ಹೇಳಿದ್ದರು. ಈ ಹೇಳಿಕೆ ಪ್ರಚೋದನಕಾರಿ ಎಂದು ದೂರಿನಲ್ಲಿ ಆರೋಪ ಮಾಡಲಾಗಿತ್ತು.

ಬಳಿಕ ಭಾರತೀಯ ನ್ಯಾಯ ಸಂಹಿತೆ 2023ರ ಸೆಕ್ಷನ್ 196(1)(ಎ) ಅಡಿಯಲ್ಲಿ ಬೊಮ್ಮಾಯಿಗೆ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೀಗ ಹೈಕೋರ್ಟ್ ಕೇಸ್‌ಗಳನ್ನು ರದ್ದುಪಡಿಸಿ ಬೊಮ್ಮಾಯಿಗೆ clean ಚಿಟ್ ನೀಡಿದೆ.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!

You cannot copy content of this page