
Bengaluru: ವಕ್ಫ್ ಆಸ್ತಿಗಳ ಕುರಿತು ನೀಡಿದ್ದ ಹೇಳಿಕೆಯ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ವಿರುದ್ಧದ ಎರಡು ಕೇಸ್ಗಳನ್ನು ಹೈಕೋರ್ಟ್ (High Court) ರದ್ದುಗೊಳಿಸಿದೆ. ಈ ಪ್ರಕರಣದಲ್ಲಿ ಪ್ರಚೋದನಕಾರಿ ಅಂಶಗಳಿಲ್ಲ ಎಂದು ಹಿರಿಯ ವಕೀಲರು ಹೈಕೋರ್ಟ್ ನಲ್ಲಿ ವಾದಿಸಿದ್ದರು. ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರ ಪೀಠ ಈ ಬಗ್ಗೆ ಶುಕ್ರವಾರ ಆದೇಶ ಹೊರಡಿಸಿದೆ.
ಈ ಪ್ರಕರಣಗಳು ಹಾವೇರಿ ಜಿಲ್ಲೆಯ ಸವಣೂರು ಮತ್ತು ಶಿಗ್ಗಾಂವಿ ಪೊಲೀಸ್ ಠಾಣೆಗಳಲ್ಲಿ 2024ರಲ್ಲಿ ದಾಖಲಾಗಿದ್ದವು. ಬಳಿಕ ಬೊಮ್ಮಾಯಿ ಅವರು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ಎರಡು ಕೇಸ್ಗಳನ್ನು ರದ್ದುಪಡಿಸಿದೆ. ಈ ಮೂಲಕ ಬೊಮ್ಮಾಯಿಗೆ ನ್ಯಾಯಾಲಯದಿಂದ ದೊಡ್ಡ ರಿಲೀಫ್ ಸಿಕ್ಕಿದೆ.
ವಕ್ಫ್ ಮಂಡಳಿ ವಿರುದ್ಧ 2024ರ ನವೆಂಬರ್ನಲ್ಲಿ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿತ್ತು. ಈ ಸಂದರ್ಭದಲ್ಲಿ ಬೊಮ್ಮಾಯಿ “ಸವಣೂರಿನಲ್ಲಿ ಎಲ್ಲಿಗೆ ಕಲ್ಲು ಎಸೆದರೂ ಅದು ವಕ್ಫ್ ಭೂಮಿಗೆ ಬಿದ್ದಂತೆ ಆಗುತ್ತದೆ” ಎಂದು ಹೇಳಿದ್ದರು. ಈ ಹೇಳಿಕೆ ಪ್ರಚೋದನಕಾರಿ ಎಂದು ದೂರಿನಲ್ಲಿ ಆರೋಪ ಮಾಡಲಾಗಿತ್ತು.
ಬಳಿಕ ಭಾರತೀಯ ನ್ಯಾಯ ಸಂಹಿತೆ 2023ರ ಸೆಕ್ಷನ್ 196(1)(ಎ) ಅಡಿಯಲ್ಲಿ ಬೊಮ್ಮಾಯಿಗೆ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೀಗ ಹೈಕೋರ್ಟ್ ಕೇಸ್ಗಳನ್ನು ರದ್ದುಪಡಿಸಿ ಬೊಮ್ಮಾಯಿಗೆ clean ಚಿಟ್ ನೀಡಿದೆ.