Home Karnataka Ramzan ವೇಳೆ ಮುಸ್ಲಿಂ ಸರ್ಕಾರಿ ನೌಕರರಿಗೆ ಕೆಲಸದ ಅವಧಿಯಲ್ಲಿ 1 ಗಂಟೆ ವಿನಾಯಿತಿ ನೀಡಲು ಮನವಿ

Ramzan ವೇಳೆ ಮುಸ್ಲಿಂ ಸರ್ಕಾರಿ ನೌಕರರಿಗೆ ಕೆಲಸದ ಅವಧಿಯಲ್ಲಿ 1 ಗಂಟೆ ವಿನಾಯಿತಿ ನೀಡಲು ಮನವಿ

Chief Minister Siddaramaiah

Bengaluru: ರಂಜಾನ್ (Ramzan) ಸಮಯದಲ್ಲಿ ಉಪವಾಸ ತೊರೆಯಲು ಮುಸ್ಲಿಂ ಸರ್ಕಾರಿ ನೌಕರರಿಗೆ ಒಂದು ಗಂಟೆ ಕೆಲಸದ ವಿನಾಯಿತಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೆಪಿಸಿಸಿ ಉಪಾಧ್ಯಕ್ಷರಾದ ಸೈಯದ್ ಅಹ್ಮದ್ ಮತ್ತು ನಜೀರ್ ಅಹ್ಮದ್ (KPCC vice-presidents Syed Ahmed and Nazir Ahmed) ಮನವಿ ಮಾಡಿದ್ದಾರೆ.

ಈಗಾಗಲೇ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಮುಸ್ಲಿಂ ಸರ್ಕಾರಿ ನೌಕರರಿಗೆ ರಂಜಾನ್ ಉಪವಾಸ ಸೌಕರ್ಯಕ್ಕಾಗಿ ಕೆಲಸದ ಅವಧಿಯಲ್ಲಿ ವಿನಾಯಿತಿ ನೀಡಲಾಗುತ್ತಿದೆ. ಅದೇ ರೀತಿ ಕರ್ನಾಟಕದಲ್ಲಿಯೂ ಈ ಅವಕಾಶ ನೀಡಬೇಕೆಂದು ಅವರು ಸಿಎಂಗೆ ಪತ್ರ ಬರೆದಿದ್ದಾರೆ.

“ರಂಜಾನ್ ತಿಂಗಳು ಸಮೀಪಿಸುತ್ತಿದ್ದು, ಮುಸ್ಲಿಂ ಬಾಂಧವರು ಒಂದು ತಿಂಗಳು ಉಪವಾಸ ಇರುತ್ತಾರೆ. ಹೀಗಾಗಿ, ಆಂಧ್ರಪ್ರದೇಶ ಮತ್ತು ತೆಲಂಗಾಣ ಸರ್ಕಾರಗಳು ಸರ್ಕಾರಿ ನೌಕರರಿಗೆ ಸಂಜೆ 4 ಗಂಟೆಯ ನಂತರ ಮನೆಗೆ ತೆರಳಿ ಉಪವಾಸ ಮುಕ್ತಾಯ (ಇಪ್ತಿಯಾರ್) ಮಾಡಲು ಅನುಮತಿ ನೀಡಿದ್ದಾರೆ.

ಆದ್ದರಿಂದ, ದಯವಿಟ್ಟು ಕರ್ನಾಟಕದ ಸರ್ಕಾರಿ ನೌಕರರಿಗೆ ಕೂಡ ಇದೇ ರೀತಿ ವಿನಾಯಿತಿ ನೀಡಲು ಸಮ್ಮತಿಸಬೇಕಾಗಿ ವಿನಂತಿಸುತ್ತೇವೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

You cannot copy content of this page

Exit mobile version