Home Karnataka Chikkaballapura ಏಳನೇ ವೇತನ ಆಯೋಗ ಜಾರಿಗೊಳಿಸಲು ಗ್ರಾಮೀಣ ಅಂಚೆ ನೌಕರರ ಪ್ರತಿಭಟನೆ

ಏಳನೇ ವೇತನ ಆಯೋಗ ಜಾರಿಗೊಳಿಸಲು ಗ್ರಾಮೀಣ ಅಂಚೆ ನೌಕರರ ಪ್ರತಿಭಟನೆ

Chikkaballapur : ಚಿಕ್ಕಬಳ್ಳಾಪುರ ನಗರದ ಬಿಬಿ ರಸ್ತೆಯ ಜಿಲ್ಲಾ ಕೇಂದ್ರ ಅಂಚೆ ಕಚೇರಿ ಎದುರು ಏಳನೇ ವೇತನ ಆಯೋಗ ಜಾರಿ, ಕಮಲೇಶ್ ಚಂದ್ರ ವರದಿ ಅನುಷ್ಠಾನಕ್ಕಾಗಿ ಆಗ್ರಹಿಸಿ ಗ್ರಾಮೀಣ ಅಂಚೆ ನೌಕರರು (Rural postal employees) ಅನಿರ್ಧಿಷ್ಟಾವಧಿ ಪ್ರತಿಭಟನೆ (Protest) ಪ್ರಾರಂಭಿಸಿದ್ದಾರೆ.

ನ್ಯಾಷನಲ್ ಯೂನಿಯನ್ ಗ್ರಾಮೀಣ ಅಂಚೆ ನೌಕರರ ಸಂಘದ ವಿಭಾಗೀಯ ಕಾರ್ಯದರ್ಶಿ ಸಂಜೀವಪ್ಪ ಮಾತನಾಡಿ “ಏಳನೇ ವೇತನ ಆಯೋಗದ ಶಿಫಾರಸ್ಸು ಹಾಗೂ ಕಮಲೇಶ್ ಚಂದ್ರ ವರದಿ ಜಾರಿ, ಸಮಾನ ಕೆಲಸಕ್ಕೆ ಸಮಾನ ವೇತನ, ನಿವೃತ್ತಿ ವೇತನ ನೀಡಿ 12, 24, 36 ವರ್ಷ ಸೇವೆ ಸಲ್ಲಿಸಿದವರಿಗೆ ಭಡ್ತಿ ನೀಡಬೇಕು. ನೂತನ ನೇಮಕಾತಿ ಆದ ನೌಕರರಿಗೆ ಕೆಲಸದ ಆಧಾರಿತವಾಗಿ ವೇತನ ನಿಗದಿಗೊಳಿಸಿ ಎಲ್ಲ ಬಿಒಗಳಿಗೆ ಲ್ಯಾಪ್‌ಟಾಪ್, ಪ್ರಿಂಟರ್ ನೀಡಬೇಕು”ಎಂದು ಹೇಳಿದರು.

ಪ್ರತಿಭಟನೆಯಲ್ಲಿ ನೌಕರರಾದ ಉಷಾರಾಣಿ, ಟಿ.ಎನ್.ವಿಜಯಶಂಕರ್, ಗಂಗ ರಾಜು, ಗೋಪಾಲ್, ಮಂಜುನಾಥ್, ರಾಮಪ್ಪ, ಕೃಷ್ಣಮೂರ್ತಿ, ಬಾಲಕೃಷ್ಣ, ಸ್ವರೂಪ, ಮುನಿರಾಜು, ಸುಧಾರಾಣಿ, ಶ್ಯಾಮಲ ಮತ್ತಿತರರು ಪಾಲ್ಗೊಂಡಿದ್ದರು.

For Daily Updates WhatsApp ‘HI’ to 7406303366

The post ಏಳನೇ ವೇತನ ಆಯೋಗ ಜಾರಿಗೊಳಿಸಲು ಗ್ರಾಮೀಣ ಅಂಚೆ ನೌಕರರ ಪ್ರತಿಭಟನೆ appeared first on Chikkaballapur.

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.

You cannot copy content of this page

Exit mobile version