Home Karnataka Chikkaballapura ಬೀದಿ ನಾಯಿಗಳ ದಾಳಿಗೆ ಮೃತಪಟ್ಟ ಬಾಲಕನ ಪೋಷಕರಿಗೆ ಪರಿಹಾರ ಧನ ವಿತರಣೆ

ಬೀದಿ ನಾಯಿಗಳ ದಾಳಿಗೆ ಮೃತಪಟ್ಟ ಬಾಲಕನ ಪೋಷಕರಿಗೆ ಪರಿಹಾರ ಧನ ವಿತರಣೆ

Sidlaghatta, Chikkaballapur : ಬೀದಿ ನಾಯಿಗಳ (Street Dogs) ದಾಳಿಗೆ ತುತ್ತಾಗಿ ಮೃತಪಟ್ಟಿದ್ದ (Boy Death) ಖಲಂದರ್‌ಖಾನ್ ಪೋಷಕರಿಗೆ 2 ಲಕ್ಷ ರೂ ಪರಿಹಾರದ ಚೆಕ್‌ನ್ನು ನಗರಸಭೆ ಅಧ್ಯಕ್ಷೆ ಸುಮಿತ್ರಾ ರಮೇಶ್ (CMC President Smt. Sumitra Ramesh) ಶುಕ್ರವಾರ ವಿತರಿಸಿದರು.

 ಕಳೆದ ಅಕ್ಟೋಬರ್ ತಿಂಗಳಿನಲ್ಲಿ ನಗರದ 18 ನೇ ವಾರ್ಡಿನ ಬಾಬಾಜಾನ್ ಎಂಬುವವರ 11 ವರ್ಷದ ಮಗ ಖಲಂದರ್ ಖಾನ್ ನ ಮೇಲೆ ಬೀದಿ ನಾಯಿಗಳು ನಡೆಸಿದ ದಾಳಿಯಿಂದ ಬಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದ. ಸ್ಥಳಕ್ಕೆ ಅಂದು ಭೇಟಿ ನೀಡಿದ್ದ ನಗರಸಭೆ ಅಧ್ಯಕ್ಷೆ ಸುಮಿತ್ರಾ ರಮೇಶ್ ಪರಿಹಾರ ನೀಡುವ ಭರವಸೆ ನೀಡಿದ್ದ ಹಿನ್ನಲೆಯಲ್ಲಿ ಶುಕ್ರವಾರ ನಗರಸಭೆ ನಿಧಿಯಿಂದ 2 ಲಕ್ಷ ರೂಗಳ ಪರಿಹಾರದ ಚೆಕ್‌ನ್ನು ವಿತರಿಸಿದರು.

 ಈ ಸಂದರ್ಭದಲ್ಲಿ ಅಧ್ಯಕ್ಷೆ ಸುಮಿತ್ರಾ ರಮೇಶ್ ಮಾತನಾಡಿ, ನಗರಸಭೆಯಿಂದ ಇದೀಗ 2 ಲಕ್ಷ ರೂಗಳ ಪರಿಹಾರ ನೀಡಲಾಗಿದ್ದು ಮುಂದಿನ ದಿನಗಳಲ್ಲಿ ಈ ಕುಟುಂಬಕ್ಕೆ ಉಚಿತ ನಿವೇಶನ ಸೇರಿದಂತೆ ಮನೆ ನಿರ್ಮಿಸಿಕೊಳ್ಳಲು ಬೇಕಾದ ಎಲ್ಲಾ ಸವಲತ್ತುಗಳನ್ನು ಮಾಡಿಕೊಡಲಾಗುವುದು. ಇದೀಗ ನೀಡಿರುವ ಪರಿಹಾರದ ಹಣವನ್ನು ದುರುಪಯೋಗ ಪಡಿಸಿಕೊಳ್ಳದೇ ಉಳಿದ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಬಳಸಿಕೊಳ್ಳುವಂತೆ ಹೇಳಿದರು.

 ಈ ಸಂದರ್ಭದಲ್ಲಿ ತಹಶೀಲ್ದಾರ್ ಬಿ.ಎಸ್.ರಾಜೀವ್, ನಗರಸಭೆ ಪೌರಾಯುಕ್ತ ಆರ್.ಶ್ರೀಕಾಂತ್, ನಗರಸಭೆ ಸದಸ್ಯ ಶಬ್ಬೀರ್, ಸುರೇಶ್, ಮುಖಂಡರಾದ ಎಸ್.ಎಂ.ರಮೇಶ್, ಆಸೀಫ್, ನವೀನ್, ಸಮೀಉಲ್ಲಾ ಹಾಜರಿದ್ದರು.

 

 

For Daily Updates WhatsApp ‘HI’ to 7406303366

You cannot copy content of this page

Exit mobile version