Home Karnataka Chikkaballapura ಘನತ್ಯಾಜ್ಯ ನಿರ್ವಹಣೆ ಯೋಜನೆಯ ಅನುಭವ ಹಂಚಿಕೆ ಕಾರ್ಯಕ್ರಮ

ಘನತ್ಯಾಜ್ಯ ನಿರ್ವಹಣೆ ಯೋಜನೆಯ ಅನುಭವ ಹಂಚಿಕೆ ಕಾರ್ಯಕ್ರಮ

0

Chikkaballapur : ಚಿಕ್ಕಬಳ್ಳಾಪುರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಘನತ್ಯಾಜ್ಯ ನಿರ್ವಹಣೆ ಯೋಜನೆಯ (Solid Waste Management) ಅನುಭವ ಹಂಚಿಕೆ ಕಾರ್ಯಕ್ರಮದಲ್ಲಿ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ “ಚಿಕ್ಕಬಳ್ಳಾಪುರ ನಗರಸಭೆ, Indian Institute for Human Settlements (ಐಐಎಚ್‌ಎಸ್) ಮತ್ತು ಗೋದ್ರೇಜ್ ಪ್ರಾಪರ್ಟಿಸ್ ಲಿಮಿಟೆಡ್, ರೈತರ ಸಹಭಾಗಿತ್ವದಲ್ಲಿ ಈ ಘನತ್ಯಾಜ್ಯ ನಿರ್ವಹಣೆ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದ್ದು, ಈ ‌ಯೋಜನೆಯಡಿ ಹಸಿ ಕಸವನ್ನು ಗೊಬ್ಬರವನ್ನಾಗಿ ಪರಿವರ್ತಿಸಲಾಗುತ್ತಿದೆ. 2024ರ ಮಾರ್ಚ್‌ನಲ್ಲಿ ಈ ಯೋಜನೆ ಆರಂಭವಾಗಿದ್ದು ಈಗಾಗಲೇ 230 ರೈತರು ಕಳೆದ ಆರು ತಿಂಗಳಿನಲ್ಲಿ ಸುಮಾರು 1,800 ಟನ್ ಕಸವನ್ನು ಗೊಬ್ಬರವಾಗಿ ಪರಿವರ್ತಿಸಿದ್ದಾರೆ” ಎಂದು ತಿಳಿಸಿದರು.

ನಗರಸಭೆ ಅಧ್ಯಕ್ಷ ಗಜೇಂದ್ರ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಮಾಧವಿ ಕೆ, ನಗರಸಭೆಯ ಸಹಾಯಕ ಕಾರ್ಯ ಪಾಲಕ ಎಂಜಿನಿಯರ್ ಉಮಾಶಂಕರ್ ಪಿ, ಗೋದ್ರೇಜ್ ಸಂಸ್ಥೆಯ ಮೋಹಿತ್ ಡೋಲಸ್, ಐಐಎಚ್‌ಎಸ್ ಸಂಸ್ಥೆಯ ಮನೀಶ್ ದುಬೆ, ಗೋಪಾಲ್ ಜೈನ, ಪುಷ್ಕರ ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

For Daily Updates WhatsApp ‘HI’ to 7406303366

The post ಘನತ್ಯಾಜ್ಯ ನಿರ್ವಹಣೆ ಯೋಜನೆಯ ಅನುಭವ ಹಂಚಿಕೆ ಕಾರ್ಯಕ್ರಮ appeared first on Chikkaballapur | Chikballapur | Chikkaballapura | ಚಿಕ್ಕಬಳ್ಳಾಪುರ ಸುದ್ದಿ.

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.

You cannot copy content of this page

Exit mobile version