back to top
22.3 C
Bengaluru
Thursday, June 19, 2025
HomeIndiaಅಗತ್ಯಕ್ಕಿಂತ ದುಪ್ಪಟ್ಟು ಆಹಾರ ಧಾನ್ಯ ಸಂಗ್ರಹವಿದೆ: Minister Pralhad Joshi

ಅಗತ್ಯಕ್ಕಿಂತ ದುಪ್ಪಟ್ಟು ಆಹಾರ ಧಾನ್ಯ ಸಂಗ್ರಹವಿದೆ: Minister Pralhad Joshi

- Advertisement -
- Advertisement -

Bengaluru: ಭಾರತ ಮತ್ತು ಪಾಕಿಸ್ತಾನ ನಡುವೆ ಉಂಟಾದ ಉದ್ವಿಗ್ನತೆ ಹಿನ್ನೆಲೆ, ದೇಶದಲ್ಲಿ ಆಹಾರ ಧಾನ್ಯಗಳ ಕೊರತೆ ಇದೆ ಎಂದು ಹಲವಾರು ವದಂತಿಗಳು ಹರಡುತ್ತಿವೆ. ಈ ಬಗ್ಗೆ ಕೇಂದ್ರ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ (Minister Pralhad Joshi) ಸ್ಪಷ್ಟನೆ ನೀಡಿದ್ದಾರೆ. ಅವರು ಹೇಳಿದಂತೆ, ದೇಶದಲ್ಲಿ ಆಹಾರ ಮತ್ತು ಅಗತ್ಯ ವಸ್ತುಗಳ ಕೊರತೆ ಎಂಬುದು ಶುದ್ಧ ಸುಳ್ಳು ಎಂದು ಹೇಳಿದ್ದಾರೆ.

ನಿನ್ನೆ ಮಾಧ್ಯಮದೊಂದಿಗೆ ಮಾತನಾಡಿದ ಸಚಿವರು, ಕೆಲವು ವ್ಯಕ್ತಿಗಳು ಸುಳ್ಳು ವದಂತಿಗಳನ್ನು ಹರಡುತ್ತಿರುವುದಾಗಿ ಹೇಳಿದ್ದಾರೆ. ಪಂಜಾಬ್ನಲ್ಲಿ ಈ ವದಂತಿ ಹರಡುತ್ತಿರುವುದಾಗಿ ಅವರು ಗಮನಕ್ಕೆ ತಂದಿದ್ದಾರೆ. ಯಾವುದೇ ರೀತಿಯಲ್ಲಿ ಆತಂಕ ಪಡುವ ಅಗತ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ದೇಶಾದ್ಯಂತ ಆಹಾರ ಪದಾರ್ಥ ಮತ್ತು ಅಗತ್ಯ ವಸ್ತುಗಳ ಸಂಗ್ರಹಣೆ ಪರಿಶೀಲನೆ ನಡೆಸಿದ್ದು, ಎಲ್ಲೆಡೆಯೂ ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಆಹಾರ ಧಾನ್ಯಗಳು ಸಂಗ್ರಹಗೊಂಡಿವೆ ಎಂದು ಸ್ಪಷ್ಟಪಡಿಸಿದ್ದಾರೆ.

ಸುಳ್ಳು ವದಂತಿಗಳ ಮೇಲೆ ಕಿವಿಗೊಡುವುದರಿಂದ ತಾತ್ಕಾಲಿಕವಾಗಿ ಆಹಾರ ಪದಾರ್ಥ ಮತ್ತು ಅಗತ್ಯ ವಸ್ತುಗಳನ್ನು ಖರೀದಿಸಲು ಜನರನ್ನು ಉತ್ತೇಜಿಸುವ ಯಾವುದೇ ಅವಶ್ಯಕತೆ ಇಲ್ಲ ಎಂದು ತಿಳಿಸಿದ್ದಾರೆ.

ದೇಶದಲ್ಲಿ ಪ್ರಸ್ತುತ ಅಕ್ಕಿ, ಗೋಧಿ, ಕಡಲೆ, ತೊಗರಿ, ಮಸೂರ್, ಹೆಸರುಕಾಳು ಹಾಗೂ ಇತರ ಆಹಾರ ಪದಾರ್ಥಗಳು ದುಪ್ಪಟ್ಟು ಪ್ರಮಾಣದಲ್ಲಿ ಸಂಗ್ರಹವಿದ್ದು, ಜನರು ಯಾವುದೇ ಕಾರಣಕ್ಕೂ ಭಯಪಡುವ ಅಗತ್ಯವಿಲ್ಲ ಎಂದು ಸಚಿವರು ಸೂಚಿಸಿದ್ದಾರೆ.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!

You cannot copy content of this page